ನನ್ನ ಹೆಸರಲ್ಲ, ನಮ್ಮೂರಿನ ಹೆಸರನ್ನು ಮುಂದೆ ತರಬೇಕು - ಸೃಷ್ಟಿ

ತನ್ನ ಹೆಸರಿಗಿಂತ, ತನ್ನ ಊರಿನ ಹಾಗೂ ಸರ್ಕಾರಿ ಶಾಲೆಯ ಹೆಸರನ್ನು ಮುಂದೆ ತರಬೇಕು ಎನ್ನುವುದು ಸೃಷ್ಟಿ ಹಿರೇಮಠ್ ಆಸೆಯಂತೆ.

'ಕನ್ನಡದ ಕಣ್ಮಣಿ' ಕಾರ್ಯಕ್ರಮದ ಸ್ಪರ್ಧಿಯಾಗಿದ್ದ ಸೃಷ್ಟಿ ಹಿರೇಮಠ್ ಈಗ ಅಂತಿಮ ಹಂತಕ್ಕೆ ಬಂದಿದ್ದಾರೆ. ಇಂತಹ ದೊಡ್ಡ ವೇದಿಕೆಯಲ್ಲಿ ಮಾತನಾಡಲು ಅವಕಾಶ ಸಿಗುತ್ತದೆ ಎಂದು ತಿಳಿದಿರಲಿಲ್ಲ. ಈ ಅವಕಾಶ ನನಗೆ ಸಿಕ್ಕಿದ್ದು ತುಂಬ ಸಂತೋಷ ನೀಡಿದೆ ಎಂದರು ಸೃಷ್ಟಿ.

ಸೃಷ್ಟಿ ಈವರೆಗೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆ, ಹಳ್ಳಿ, ಮುಖ ನೋಡಿ ಮೊಳ ಹಾಕಬೇಡ, ಶಿಕ್ಷಣದ ಉದ್ದೇಶ ಜೀವನ ಕಲಿಸುವುದು, ಗಾಂಧೀಜಿ ಅವರ 'ಬದಲಾವಣೆ ನಿನ್ನಿಂದಲೇ ಶುರು ಆಗಲಿ' ಇಂತಹ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

kannadada kanmani contestant Srusti interview

ಧಾರವಾಡ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸೃಷ್ಟಿಗೆ ತಮ್ಮ ಸರ್ಕಾರಿ ಶಾಲೆಯ ಬಗ್ಗೆ ಬಹಳ ಅಭಿಮಾನ ಇದೆ. ತಮ್ಮ ಶಾಲೆಯ ಬಗ್ಗೆ ಮಾತನಾಡಲು ಸೃಷ್ಟಿಗೆ ತುಂಬ ಇಷ್ಟವಂತೆ.

ಶಾಲೆಗೆ ರಜೆ ಇದ್ದ ದಿನ ತಮ್ಮ ನಾಲ್ಕು ಗೆಳತಿಯರ ಜೊತೆಗೆ ಆಡಿಷನ್ ನೀಡಿದ್ದರು. ಅದರಲ್ಲಿ ಸೃಷ್ಟಿ ಆಯ್ಕೆ ಆಗಿ, ಮೆಗಾ ಆಡಿಷನ್ ನಲ್ಲಿಯೂ ಪಾಸ್ ಆದರು.

ಸೃಷ್ಟಿ ಈ ಹಂತಕ್ಕೆ ಬಂದಿರುವುದಕ್ಕೆ ಇಡೀ ಊರಿನವರು ಹೆಮ್ಮೆ ಪಡುತ್ತಿದ್ದಾರಂತೆ. ನಮ್ಮ ತಾಲ್ಲೂಕು, ನಮ್ಮ ಊರು ಯಾವುದರಲ್ಲಿಯೂ ಫೇಮಸ್ ಇರಲಿಲ್ಲ. ನೀನು ನಮ್ಮ ಊರಿನ ಹೆಸರನ್ನು ಕರ್ನಾಟಕಕ್ಕೆ ತಿಳಿಯುವಂತೆ ಮಾಡಿದೆ ಎನ್ನುತ್ತಿದ್ದಾರಂತೆ.

''ನಮ್ಮ ಸರ್ಕಾರಿ ಶಾಲೆ ಹಾಗೂ ನಮ್ಮ ಊರನ್ನು ಮುಂದೆ ತರಬೇಕು'' ಎನ್ನುವುದು ಸೃಷ್ಟಿ ಅವರ ಆಸೆಯಾಗಿದೆ.

More from Filmibeat

English summary
Zee kannada channel 'Kannadada Kanmani' contestant Srusti Hiremata interview.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X