Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನರ ಭಾವನೆಗಳ ಜೊತೆ ಆಟವಾಡಬೇಡಿ: ಫೋಟೋ ಶೇರ್ ಮಾಡಿ ಸುಧಾರಾಣಿ ಎಚ್ಚರಿಕೆಯ ಸಂದೇಶ
ಸ್ಯಾಂಡಲ್ ವುಡ್ ನ ಹಿರಿಯ ನಟಿ ಸುಧಾರಾಣಿ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಆಗಾಗ ಕುಟುಂಬದ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ತಾವಾಯಿತು ತಮ್ಮ ಸಿನಿಮಾವಾಯಿತು ಅಂತ ಬ್ಯುಸಿ ಇರುವ ಸುಧಾರಾಣಿ ಬೇರೆ ವಿಚಾರಗಳಿಗೆ ಹೆಚ್ಚು ತಲೆಕೆಡಿಸಿಕೊಂಡವರಲ್ಲ.
ಆದರೀಗ ಕೋಪಗೊಂಡಿರುವ ಸುಧಾರಾಣಿ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದೆ. ಜನರ ಭಾವನೆಗಳ ಜೊತೆ ಆಟವಾಡಬೇಡಿ ಎಂದು ಡಾ.ರಾಜ್ ಕುಮಾರ್ ಜೊತೆಗಿರುವ ಫೋಟೋವನ್ನು ಶೇರ್ ಮಾಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಷ್ಟಕ್ಕು ಸುಧಾರಾಣಿ ಕೆಂಡವಾಗಿದ್ದೇಕೆ, ದಿಢೀರ್ ಅಂತ ಈ ಪೋಸ್ಟ್ ಹಾಕಿದ್ದೇಕೆ? ಯಾಕೆಂದರೆ ಡಾ.ರಾಜ್ ಕುಮಾರ್ ಪ್ರತಿಮೆ ವಿಚಾರವಾಗಿ ಶಾಂತಿ ನಗರದ ಶಾಸಕ ಎನ್ ಎ ಹ್ಯಾರಿಸ್ ಆಡಿದ ಮಾತಿನಿಂದ ಎನ್ನುವುದು ಗೊತ್ತಾಗುತ್ತಿದೆ. ಡಾ. ರಾಜ್ ಕುಮಾರ್ ಪ್ರತಿಮೆ ವಿಚಾರವಾಗಿ ಹ್ಯಾರಿಸ್ ವಿವಾದಿತ ಹೇಳಿಕೆ ನೀಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ.
ಡಾ ರಾಜ್ ಪ್ರತಿಮೆಗೆ ಅಪಮಾನ ಆರೋಪ: ಶಾಸಕ ಹ್ಯಾರೀಸ್ ಸ್ಪಷ್ಟನೆ
ಆದರೆ ಸುಧಾರಾಣಿ ಇಲ್ಲಿ ಯಾರ ಹೆಸರನ್ನು ಉಲ್ಲೇಖ ಮಾಡದೆ ಡಾ.ರಾಜ್ ಕುಮಾರ್ ಅವರ ಬಗ್ಗೆ ಬಾಯಿಗೆ ಬಂದಹಾಗೆ ಮಾತನಾಡಿ ಜನರ ಭಾವನೆಯ ಜೊತೆ ಆಟವಾಡಬೇಡಿ ಎಂದು ಹೇಳಿದ್ದಾರೆ. ಮುಂದೆ ಓದಿ..
ಸುಧಾರಾಣಿ ಪೋಸ್ಟ್ ನಲ್ಲಿ ಏನಿದೆ?
ದೇವತಾ ಮನುಷ್ಯ ಸಿನಿಮಾದಲ್ಲಿ ಡಾ.ರಾಜ್ ಕುಮಾರ್ ಮಗಳಾಗಿ ನಟಿಸಿದ್ದ ಫೋಟೋವನ್ನು ಸುಧಾರಾಣಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ,'ಜನರ ಭಾವನೆಗಳ ಜೊತೆ ಆಟವಾಡಬೇಡಿ. ಮತನಾಡುವ ಮೊದಲು ಯೋಚಿಸಿ' ಎಂದು ಹೇಳಿದ್ದಾರೆ.
ಸಲ್ಲದ ವಿಷಯದ ಬಗ್ಗೆ ಮಾತನಾಡಬೇಡಿ
ಮತ್ತೊಂದು ಪೋಸ್ಟ್ ನಲ್ಲಿ ರಾಜ್ ಕುಮಾರ್ ಅವರ ಹೆಗಲಮೇಲೆ ಮಲಗಿರುವ ಫೋಟೋ ಶೇರ್ ಮಾಡಿ, 'ಅಭಿಮಾನದ ಅಣೆಕಟ್ಟು ಒಡೆಯಬೇಡಿ. ಸಲ್ಲದ ವಿಷಯದ ಬಗ್ಗೆ ಮಾತನಾಡುವುದು ಸರಿ ಅಲ್ಲ' ಎಂದು ಹೇಳಿದ್ದಾರೆ.
ಹ್ಯಾರಿಸ್ ವಿಡಿಯೋದಲ್ಲಿ ಏನಿದೆ?
'ಪ್ರತಿಮೆ ಇಡುವುದೇ ದೊಡ್ಡ ಕತೆ, ಆಫೀಸ್ ಬೇರೆ ಮಾಡಿಕೊಡೋಕೆ ಆಗುತ್ತಾ? ಅವರ್ಯಾರೋ ರಾಜ್ ಕುಮಾರ್ಗೆಂದು ಮಾಡಿದ್ದಾರೆ. ಅದನ್ನು ತೆಗೆಯಿರಿ, ಸ್ಟ್ಯಾಚ್ಯುಗೆಲ್ಲ ಕವರ್ ಮಾಡಿ ಏಕೆ ಇಡ್ತಾರೆ, ರಸ್ತೆಯಲ್ಲಿ ಏಕೆ ಇಡ್ತಾರೆ, ಮನೆಯಲ್ಲಿ ಇಡಬಹುದಿತ್ತು ಅಲ್ವೇ?....' ಎಂದು ಶಾಸಕ ಹ್ಯಾರಿಸ್ ಮಾತನಾಡಿದ್ದರು. ಈ ವಿಡಿಯೋದಲ್ಲಿ ಡಾ ರಾಜ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಅಣ್ಣಾವ್ರ ಅಭಿಮಾನಿಗಳು ಕಿಡಿ ರೊಚ್ಚಿಗೆದಿದ್ದಾರೆ.
Recommended Video
ಕ್ಷಮೆಯಾಚಿಸಿದ ಹ್ಯಾರಿಸ್
'ರಾಜ್ ಕುಮಾರ್ ಪ್ರತಿಮೆ ಪಕ್ಕ ಒಂದು ಬೋರ್ಡ್ ಹಾಕಬೇಕು ಅಂದ್ರು ಸರಿ ಹಾಕಿ ಎಂದು ಹೇಳಿ ಬಂದಿದ್ದೇನೆ ಅಷ್ಟೇ. ನಾನು ಅಣ್ಣಾವ್ರ ದೊಡ್ಡ ಅಭಿಮಾನಿ. ಇಂಟರ್ ನ್ಯಾಷನಲ್ ಅಣ್ಣಾವ್ರು ಅಂದ್ರೆ ರಾಜ್ ಕುಮಾರ್. ಅವರ ಬಗ್ಗೆ ಯಾರಾದರೂ ಮಾತಾಡೋಕೆ ಆಗುತ್ತಾ, ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ತಿರುಚಿ ಕಟ್ ವೈರಲ್ ಮಾಡಲಾಗಿದೆ. ಪ್ರತಿಮೆ ಸ್ಥಾಪನೆಗೆ ನಾನು ಶ್ರಮಿಸಿದ್ದೇನೆ. ಅಭಿಮಾನಿಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ' ಎಂದು ಹ್ಯಾರಿಸ್ ಸ್ಪಷ್ಟನೆ ನೀಡಿದ್ದಾರೆ.