Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕ ರಘು ದೀಕ್ಷಿತ್ ಬಗ್ಗೆ ಹೀಗೊಂದು ತಪ್ಪು ಕಲ್ಪನೆ.!
'ನಿನ್ನ ಪೂಜೆಗೆ ಬಂದೆ ಮಹಾದೇಶ್ವರ...' ಹಾಡು ಕೇಳಿದ ಕೂಡಲೆ ನಿಮಗೆ ಥಟ್ ಅಂತ ನೆನಪಾಗುವುದು ಗಾಯಕ ರಘು ದೀಕ್ಷಿತ್. 'ಸೈಕೋ', 'ಜಸ್ಟ್ ಮಾತ್ ಮಾತಲ್ಲಿ' ಚಿತ್ರಗಳಿಗೆ ಸಂಗೀತ ನೀಡಿರುವ ರಘು ದೀಕ್ಷಿತ್ ಕೈಯಲ್ಲಿ ಸದ್ಯ 'ಪ್ರದೇಶ ಸಮಾಚಾರ', 'ಗರುಡ' ಮುಂತಾದ ಚಿತ್ರಗಳಿವೆ.
ಜೊತೆಗೆ ಬಾಲಿವುಡ್ ನಲ್ಲಿ ಸೈಫ್ ಅಲಿ ಖಾನ್ ಚಿತ್ರಕ್ಕೂ ರಘು ದೀಕ್ಷಿತ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇಂತಿಪ್ಪ ರಘು ದೀಕ್ಷಿತ್ ಬಗ್ಗೆ ಒಂದು ತಪ್ಪು ಕಲ್ಪನೆ ಇದೆ.
ಅದೇನಪ್ಪಾ ಅಂದ್ರೆ, ''ರಘು ದೀಕ್ಷಿತ್ ಸಿಕ್ಕಾಪಟ್ಟೆ ಬಿಜಿ.. ಅವರು ಯಾವಾಗಲೂ ಲಂಡನ್, ಯು.ಎಸ್.ಎ ನಲ್ಲಿರ್ತಾರೆ... ಅವರು ಅಷ್ಟು ಸುಲಭವಾಗಿ ಯಾರ ಕೈಗೂ ಸಿಗಲ್ಲ'' ಅಂತ ಯಾರು ಗಾಸಿಪ್ ಹಬ್ಬಿಸಿದ್ರೋ, ಗೊತ್ತಿಲ್ಲ. ಒಟ್ನಲ್ಲಿ ರಘು ದೀಕ್ಷಿತ್ ಬಗ್ಗೆ ಹೀಗೆ ತಪ್ಪು ಕಲ್ಪನೆ ಮೂಡಿದೆ.
ಓದಬೇಕಿದ್ದ ಕಾಲೇಜ್ ಗೆ ಅತಿಥಿಯಾಗಿ ಹೋಗಿದ್ದ 'ಬಿಗ್ ಬಾಸ್' ಜಯಶ್ರೀ
ಇದನ್ನೆಲ್ಲ ಕೇಳಿ ಬೇಸರ ಮಾಡಿಕೊಂಡಿರುವ ರಘು ದೀಕ್ಷಿತ್, ''ಯಾವಾಗಲೂ ನಾನು ವಿದೇಶದಲ್ಲಿ ಇರಲ್ಲ. ವರ್ಷದಲ್ಲಿ ಒಂದು ತಿಂಗಳು ಮಾತ್ರ ಹೋಗುವೆ ಅಷ್ಟೇ. ಇಂದಿರಾನಗರದಲ್ಲಿ ನನ್ನ ಸ್ಟುಡಿಯೋ ಇದೆ. ಅಲ್ಲೇ ನಾನು ಸಿಗುವೆ. ಫೇಸ್ ಬುಕ್ ನಲ್ಲೂ ಸ್ಯಾಂಡಲ್ ವುಡ್ ಮಂದಿ ನನ್ನನ್ನ ಅಪ್ರೋಚ್ ಮಾಡಬಹುದು'' ಅಂತ ಫಿಲ್ಮಿಬೀಟ್ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ರಘು ದೀಕ್ಷಿತ್ ಹೇಳಿದ್ದಾರೆ.
ರಘು ದೀಕ್ಷಿತ್ ಸಂದರ್ಶನದ ಮೊದಲ ಭಾಗ ಇಲ್ಲಿದೆ ನೋಡಿ...