Don't Miss!
- News ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಭೇಟಿ ಕೊಟ್ಟು ಪ್ರಚಾರ ಆರಂಭಿಸಿದ ಕೆಎಸ್ ಈಶ್ವರಪ್ಪ!
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲಾ ಮುಗಿದ್ಮೇಲೆ ಹುಚ್ಚ ವೆಂಕಟ್ ದಿಢೀರ್ ಪ್ರೆಸ್ ಮೀಟ್ ಮಾಡಿದ್ಯಾಕೆ?
ಪ್ರಥಮ್ ಮೇಲೆ ಹುಚ್ಚ ವೆಂಕಟ್ ಹಲ್ಲೆ ಮಾಡಿದ್ದು, ಅದಾದ ನಂತರ ಕಿಚ್ಚ ಸುದೀಪ್ 'ಬಿಗ್ ಬಾಸ್' ಕಾರ್ಯಕ್ರಮವನ್ನ ನಿರೂಪಣೆ ಮಾಡಲ್ಲ ಅಂದಿದ್ದು, ಆಮೇಲೆ ಹುಚ್ಚ ವೆಂಕಟ್ ಕ್ಷಮೆ ಕೇಳಿದ್ದು, ಇದೆಲ್ಲ ಬೆಳವಣಿಗೆ ಆದ ನಂತರ 'ಬಿಗ್ ಬಾಸ್' ಕಾರ್ಯಕ್ರಮವನ್ನ ಎಂದಿನಂತೆ ಸುದೀಪ್ ನಿರೂಪಣೆ ಮಾಡಿದರು. ಅಲ್ಲಿಗೆ, ವಿವಾದಕ್ಕೆ ಫುಲ್ ಸ್ಟಾಪ್ ಬಿತ್ತು.
ಎಲ್ಲವೂ ಮುಗಿದು ಹೋದರೂ, ಹುಚ್ಚ ವೆಂಕಟ್ ಮಾತ್ರ ಸುಮ್ಮನೆ ಕೂರಲಿಲ್ಲ. ದಿಢೀರ್ ಅಂತ ಪ್ರೆಸ್ ಮೀಟ್ ಕರೆದರು. ಈ ವೇಳೆ ನಮ್ಮ 'ಫಿಲ್ಮಿಬೀಟ್ ಕನ್ನಡ' ಜೊತೆ ಮಾತಿಗೆ ಸಿಕ್ಕ ವೆಂಕಟ್, ಪ್ರಥಮ್ ಮೇಲೆ ಮತ್ತೆ ಗರಂ ಆದರು. ''ಪ್ರಥಮ್ ನನ್ನ ಎಕ್ಕಡ. ಅವನು ಇರುವೆ. ನನ್ನ ರೇಂಜ್ ಏನು? ಅವನ ರೇಂಜ್ ಏನು? ನಾನು ವರ್ಲ್ಡ್ ಫೇಮಸ್, ಅವನು ಅವನ ಏರಿಯಾನೇ ಫೇಮಸ್ ಅಲ್ಲ'' ಅಂತ ಬಾಯಿಗೆ ಬಂದ್ಹಂಗೆ ಮಾತನಾಡಿದರು. ['ಪ್ರಥಮ್ ನನ್ನ ಎಕ್ಕಡ': ಮತ್ತೆ ರೊಚ್ಚಿಗೆದ್ದ ಹುಚ್ಚ ವೆಂಕಟ್]
ಸಾಲದು ಅಂತ ಅವರಿಗಿರುವ ದೊಡ್ಡ ಆಸೆ ಬಗ್ಗೆ ಬಾಯ್ಬಿಟ್ಟರು. ಆ ಆಸೆ ನೆರವೇರುವುದು ಕಿಚ್ಚ ಸುದೀಪ್ ಕೈಯಲ್ಲಿದೆ. ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಹುಚ್ಚ ವೆಂಕಟ್ ನೀಡಿರುವ ಸಂದರ್ಶನದ ವಿಡಿಯೋ ಇಲ್ಲಿದೆ. ಮಿಸ್ ಮಾಡದೆ ನೋಡಿ...