Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ' ಸೆಟ್ ನಲ್ಲಿ ಅಗ್ನಿ ಅವಘಡ.!
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ' ಚಿತ್ರದ ಚಿತ್ರೀಕರಣದ ಸೆಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಿಂದ 30 ಕಿ.ಮಿ ದೂರದ ಪುಟ್ಟ ಹಳ್ಳಿಯಲ್ಲಿ 'ಕೇಸರಿ' ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಕ್ಲೈಮ್ಯಾಕ್ಸ್ ಹಾಗೂ ಕೆಲ ಸನ್ನಿವೇಶಗಳ ಚಿತ್ರೀಕರಣ ಮುಗಿದ್ಮೇಲೆ, ಸೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಸಾತಾರಾ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
'ಕೇಸರಿ' ಚಿತ್ರದಲ್ಲಿ ಬಾಂಬ್ ಸ್ಫೋಟದ ಕೆಲ ಸೀನ್ ಗಳಿವೆ. ಅದನ್ನ ಚಿತ್ರೀಕರಿಸಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಶೂಟಿಂಗ್ ಮುಗಿಸಿ ಅಕ್ಷಯ್ ಕುಮಾರ್ ಹೊರಟ್ಮೇಲೆ, ಈ ಘಟನೆ ನಡೆದಿದೆ ಎಂದು ವರದಿ ಆಗಿದೆ.
'ಕೇಸರಿ' ಫೋಟೋ ಎಡವಟ್ಟು: ಟ್ರೋಲ್ ಆದ ಕರಣ್ ಜೋಹರ್.!
ಧರ್ಮ ಪ್ರೊಡಕ್ಷನ್ಸ್ ಹಾಗೂ ಕೇಪ್ ಆಫ್ ಗುಡ್ ಫಿಲ್ಮ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಚಿತ್ರ 'ಕೇಸರಿ'. 1897 ರಲ್ಲಿ ನಡೆದ ಸಾರಗರ್ಹಿ ಕದನದಲ್ಲಿ 10,000 ಅಫ್ಗನ್ ಗಳ ವಿರುದ್ಧ ಹೋರಾಡಿದ 21 ಸಿಖ್ಖರ ಸುತ್ತ ಹೆಣೆದಿರುವ ಕಥೆಯೇ 'ಕೇಸರಿ'. ಅನುರಾಗ್ ಸಿಂಗ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆಗೆ ಪರಿಣಿತಿ ಛೋಪ್ರ ಅಭಿನಯಿಸುತ್ತಿದ್ದಾರೆ.