Don't Miss!
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಬರಿಮಲೆಗೆ ಬರುವ ಮಹಿಳೆಯರನ್ನ ಕತ್ತರಿಸಿ ಎಂದ ನಟ
ಶಬರಿಮಲೆಗೆ ಮಹಿಳೆಯರು ಹೋಗಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಆದೇಶವನ್ನ ಕೆಲ ಭಕ್ತವರ್ಗ ವಿರೋಧಿಸುತ್ತಿದೆ. ಯಾವುದೇ ಕಾರಣಕ್ಕೂ ಮಹಿಳೆಯರು ಶಬರಿಮಲೆ ಪ್ರವೇಶಿಸಬಾರದು ಎನ್ನುತ್ತಿದೆ.
ಹೀಗಿರುವಾಗ ಮಲಯಾಳಂ ನಟ ಕೊಲ್ಲಂ ತುಳಸಿ ವಿವಾದಾತ್ಮಕ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. 'ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬರುವ ಮಹಿಳೆಯರನ್ನು ಕತ್ತರಿಸಿ, ಒಂದು ಭಾಗವನ್ನು ದೆಹಲಿಗೆ, ಇನ್ನೊಂದು ಭಾಗವನ್ನು ಕೇರಳ ಮುಖ್ಯಮಂತ್ರಿ ಕಚೇರಿಗೆ ಕಳಿಸಿ' ಎಂದು ಕೊಲ್ಲಂ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ್ದಾರೆ.
ಶಬರಿಮಲೆ ದೇವಳಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಕಾರಣ ಗೊತ್ತೆ?
ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡಬಾರದು, ಅದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ಪದ್ಧತಿಯನ್ನು ಎಷ್ಟೋ ಶತಮಾನಗಳಿಂದ ನಡೆಸಿಕೊಂಡು ಬಂದಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಇದ್ಯಾವುದನ್ನೂ ಪರಿಗಣಿಸದೆ, ಮಹಿಳೆಯರಿಗೆ ಪ್ರವೇಶ ನೀಡಲು ಅನುಮತಿ ನೀಡಿದೆ. ಇದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಕೇಳಿ ಯಾವುದಾದರೂ ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಬಂದರೆ ಅವರನ್ನು ಎರಡು ಭಾಗವಾಗಿ ಸೀಳಿ ಎಂದು ಕರೆ ನೀಡಿದ್ದಾರೆ.
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ: ಸುಪ್ರೀಂನಿಂದ ಐತಿಹಾಸಿಕ ತೀರ್ಪು
Women coming to #Sabarimala temple should be ripped in half. One half should be sent to Delhi and the other half should be thrown to Chief Minister's office in Thiruvananthapuram: Actor Kollam Thulasi, in Kollam #Kerala. pic.twitter.com/r4cL72mzJm
— ANI (@ANI) October 12, 2018
800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ಶಬರಿಮಲೆ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆಪ್ಟೆಂಬರ್ 28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು.