Don't Miss!
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- News ಚೊಂಬನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿ ಪಿಕ್ಪಾಕೆಟ್ ಜಾಹೀರಾತು- ಡಿಕೆಶಿ ವಾಗ್ದಾಳಿ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದೇಶದಲ್ಲಿ ಸಿಲುಕಿದ್ದ ನಟ ಪೃಥ್ವಿರಾಜ್ ಕೊನೆಗೂ ತಾಯ್ನಾಡಿಗೆ ವಾಪಸ್
ಶೂಟಿಂಗ್ ಗೆಂದು ವಿದೇಶಕ್ಕೆ ತೆರಳಿದ್ದ ಮಲಯಾಳಂ ಖ್ಯಾತ ನಟ ಪೃಥ್ವಿರಾಜ್ ಕೊನೆಗೂ ಭಾರತಕ್ಕೆ ವಾಪಸ್ ಆಗಿದ್ದಾರೆ. ಅವರ ಜೊತೆ ಇಡೀ ಚಿತ್ರತಂಡ ತಾಯ್ನಾಡಿಗೆ ಮರಳಿದ್ದಾರೆ.
Recommended Video
ಸುಮಾರು 2 ತಿಂಗಳಿಂದ ಪೃಥ್ವಿರಾಜ್ ಮತ್ತು ಸಿನಿಮಾತಂಡ ದೂರದ ಜೋರ್ಡಾನ್ ನಲ್ಲಿ ಸಿಲುಕಿಕೊಂಡಿದ್ದರು. ನಟ, ನಿರ್ದೇಶಕ ಸೇರಿದಂತೆ ಒಟ್ಟು 58ಮಂದಿ ಸಿನಿಮಾತಂಡ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಜೋರ್ಡಾನ್ ನಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಬಂದಿರುವ ತಂಡ, ಅಲ್ಲಿಂದ ಕೇರಳದ ಕೊಚ್ಚಿಗೆ ತಲುಪಿದ್ದಾರೆ. ಈ 58 ಜನ ಸದ್ಯ ಕ್ವಾರಂಟೈನಲ್ಲಿದ್ದಾರೆ.
ವಿದೇಶದಲ್ಲಿ ಸಿಲುಕಿಕೊಂಡಿರುವ ಖ್ಯಾತ ನಟ ಕೊನೆಗೂ ವಾಪಸ್ ಬರಲಿದ್ದಾರೆ
ಚಿತ್ರೀಕರಣಕ್ಕೆ ತೆರಳಿದ್ದ ಈ ತಂಡ ವಾಪಸ್ ಆಗುವುದರೊಳಗೆ ಕೊರೊನಾ ಲಾಕ್ ಡೌನ್ ಆಗಿತ್ತು. ಅಲ್ಲಿನ ಸರ್ಕಾರದ ಅನುಮತಿ ಮೇರೆಗೆ ಏಪ್ರಿಲ್ 10ರ ವರೆಗೂ ಚಿತ್ರೀಕರಣ ಮಾಡಿದ್ದ ಚಿತ್ರತಂಡ ನಂತರ ಚಿತ್ರೀಕರಣ ಪ್ಯಾಕ್ ಅಪ್ ಮಾಡಿ ಮನೆಯಲ್ಲಿಯೇ ಲಾಕ್ ಆಗಿದ್ದರು.
ಆಹಾರ ಸಮಸ್ಯೆ ಮತ್ತು ಸೋಂಕಿನ ಭಯದಿಂದ ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್ ಭಾರತಕ್ಕೆ ವಾಪಸ್ ಆಗಲು ಕೇರಳ ಅಧಿಕಾರಿಗಳ ಸಹಾಯ ಕೋರಿದ್ದರು. ಕೊನೆಗೂ ಇಡೀ ತಂಡ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ.