Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲಯಾಳಂ ಯುವನಟ ಅನುಮಾನಾಸ್ಪದ ಸಾವು
ಮಲಯಾಳಂ ಯುವನಟ ಶರತ್ ಚಂದ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 37 ವರ್ಷ ವಯಸ್ಸಾಗಿತ್ತು. ಅವರ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಹೃದಯಾಘಾತದಿಂದ ಶರತ್ ಚಂದ್ರ ಸಾವನ್ನಪ್ಪಿದ್ದಾರೆ ಎಂದು ಅನುಮಾನಿಸಲಾಗಿದೆ.
'ಅನೀಸ್ಯ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶರತ್ ಚಂದ್ರ ಆ ನಂತರ 'ಅಂಗಮಲೈ ಡೈರೀಸ್', ದುಲ್ಕರ್ ಸಲ್ಮಾನ್ ಜೊತೆಗೆ 'ಸಿಐಎ', 'ಕೂಡೆ', 'ತಾತ್ವಿಕ ಅವಲೋಕನಂ' ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.
ಸಿನಿಮಾ ರಂಗಕ್ಕೆ ಬರುವ ಮುನ್ನ ಐಟಿ ಉದ್ಯೋಗಿಯಾಗಿ ಶರತ್ ಚಂದ್ರ ಕೆಲಸ ಮಾಡಿದ್ದರು. ಬಳಿಕ ಡಬ್ಬಿಂಗ್ ಕಲಾವಿದರಾಗಿಯೂ ಕೆಲಸ ಮಾಡಿದ್ದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸುವ ಅವಕಾಶ ದೊರಕಿತ್ತು. 'ಅಂಗಮಲೈ ಡೈರೀಸ್' ಸಿನಿಮಾದಲ್ಲಿ ಅವರ ನಟನೆಗೆ ಬಹು ಮೆಚ್ಚುಗೆ ವ್ಯಕ್ತವಾಗಿತ್ತು.
ನಟ ಆಂಟೊನಿ ವರ್ಗೀಸ್ ಸೇರಿದಂತೆ ಹಲವು ಮಂದಿ ಮಲಯಾಳಂ ಸ್ಟಾರ್ ನಟರು ಶರತ್ ಚಂದ್ರ ಅವರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶರತ್ ಚಂದ್ರರ ಹಲವು ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಲಯಾಳಂನ ಹಲವು ನಟರು, ಶರತ್ ಚಂದ್ರ ಜೊತೆಗೆ ನಟಿಸಿದ್ದ ನಟರು ಸಾಮಾಜಿಕ ಜಾಲತಾಣದ ಮೂಲಕ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಕೊಚ್ಚಿಯವರಾಗಿದ್ದ ಶರತ್ ಚಂದ್ರ ಅವರ ಅಂತಿಮ ಕಾರ್ಯ ಕೊಚ್ಚಿಯಲ್ಲಿಯೇ ನಡೆಯಲಿದೆ.
Recommended Video