Don't Miss!
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಟಿಯ ಅಪಹರಣ ಪ್ರಕರಣ: ನಟನಿಗೆ ಆಪತ್ತು
ಮೂರು ವರ್ಷಗಳ ಹಿಂದೆ ನಡೆದಿದ್ದ ಕೇರಳದ ಖ್ಯಾತ ನಟಿಯೊಬ್ಬರ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯು ಫೆಬ್ರವರಿ 16 ರಿಂದ ಮತ್ತೆ ಪ್ರಾರಂಭವಾಗಲಿದ್ದು, ಆರೋಪಿ ನಟನಿಗೆ ಆತಂಕ ಎದುರಾಗಿದೆ.
ಕನ್ನಡ ಸೇರಿದಂತೆ ಇನ್ನೂ ಕೆಲವು ಭಾಷೆಗಳಲ್ಲಿ ನಟಿಸಿರುವ ಕೇರಳದ ಖ್ಯಾತ ನಟಿಯೊಬ್ಬರನ್ನು 2017 ರಲ್ಲಿ ಗುಂಪೊಂದು ಅಪಹರಣ ಮಾಡಿ, ಚಲಿಸುತ್ತಿರುವ ಕಾರಿನಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿತ್ತು. ಆ ಸಮಯದಲ್ಲಿ ಈ ಪ್ರಕರಣ ಭಾರಿ ಸದ್ದು ಮಾಡಿತ್ತು.
ಪ್ರಕರಣದ ವಿಚಾರಣೆಯು ಕೇರಳದ ವಿಶೇಷ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಕೋವಿಡ್ ಲಾಕ್ಡೌನ್ ಹಾಗೂ ಆರೋಪಿಗಳು, ಸಾಕ್ಷಿಗಳಿಗೆ ಕೋವಿಡ್ ಬಂದ ಕಾರಣ ಪ್ರಕರಣದ ವಿಚಾರಣೆ ನಿಂತಿತ್ತು. ಇದೀಗ ಮತ್ತೆ ವಿಚಾರಣೆ ಆರಂಭವಾಗಿದ್ದು, ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಕೇರಳದ ಪ್ರಖ್ಯಾತ ಸಿನಿಮಾ ನಟ ಸಹ ಇದ್ದಾರೆ.
ಖ್ಯಾತ ನಟ ದಿಲೀಪ್ ಸಹ ಆರೋಪಿ
ಕೇರಳದ ಖ್ಯಾತ ನಟರಾದ ದಿಲೀಪ್ ಸಹ ನಟಿಯ ಅಪಹರಣ ಪ್ರಕರಣದಲ್ಲಿ ಆರೋಪಿ ಆಗಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಕಾರಣ ವಿಚಾರಣೆಯನ್ನು ಮುಂದೂಡಲಾಗಿತ್ತು. ಇದೀಗ ಕೋವಿಡ್ನಿಂದ ದಿಲೀಪ್ ಗುಣಮುಖರಾಗಿದ್ದು, ಅವರ ವಿಚಾರಣೆಯನ್ನು ಫೆಬ್ರವರಿ 16 ರಂದು ಮಾಡುವ ಸಂಭವ ಇದೆ.
ಅಪ್ರೂವರ್ ಆಗಿ ಬದಲಾಗಲಿರುವ ಆರೋಪಿ
ಅದೇ ದಿನ ಪ್ರಕರಣದ ಆರೋಪಿ ವಿಷ್ಣು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಮಾಡಲಿದೆ. ವಿಷ್ಣು ತಾನು ಅಪ್ರೂವರ್ ಆಗಿ ಬದಲಾಗುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಹಾಕಿಕೊಂಡಿದ್ದಾನೆ. ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿದ್ದ ಪುಲ್ಸೇರಿ ಸುನಿಗೆ ಮೊಬೈಲ್ ತೆಗೆದುಕೊಂಡು ಹೋಗಿ ಕೊಟ್ಟಿದ್ದ ಆರೋಪ ಎದುರಿಸುತ್ತಿದ್ದಾನೆ.
ಬಂಧನಕ್ಕೊಳಗಾಗಿದ್ದ ನಟ ದಿಲೀಪ್ ಗೆ ಜಾಮೀನು ದೊರೆತಿತ್ತು
ಬಂಧನಕ್ಕೊಳಗಾಗಿದ್ದ ನಟ ದಿಲೀಪ್ ಗೆ ಜಾಮೀನು ನೀಡಲಾಗಿದ್ದು, ಜಾಮೀನನ್ನು ರದ್ದು ಮಾಡುವಂತೆ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಮನವಿಯ ವಿಚಾರಣೆ ನಡೆಯಲಿದೆ. ಜೈಲಿನ ಒಳಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತೆ ವಿಷ್ಣುಗೆ ಸೂಚನೆ ಕೊಟ್ಟಿದ್ದದ್ದು ನಟ ದಿಲೀಪ್ ಎನ್ನಲಾಗುತ್ತಿದ್ದು, ಇದೇ ಕಾರಣ ಮುಂದಿಟ್ಟುಕೊಂಡು ಜಾಮೀನು ರದ್ದುಪಡಿಸುವಂತೆ ಮನವಿ ಮಾಡಲಾಗಿದೆ.
Recommended Video
ಕನ್ನಡದ ಸ್ಟಾರ್ ನಟರ ಜೊತೆ ನಟಿಸಿದ್ದಾರೆ ಆ ನಟಿ
ಕನ್ನಡದಲ್ಲಿ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ಗಣೇಶ್ ಇನ್ನೂ ಕೆಲವು ಪ್ರಮುಖ ನಾಯಕ ನಟರೊಂದಿಗೆ ನಟಿಸಿದ್ದ ಖ್ಯಾತ ನಟಿಯನ್ನು ಗುಂಪೊಂದು ಅಪಹರಿಸಿ, ಚಲಿಸುತ್ತಿರುವ ಕಾರಿನಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಆ ಆಘಾತದಿಂದ ಹೊರಬಂದಿರುವ ನಟಿ, ಈಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾ ನಿರ್ಮಾಪಕರೊಬ್ಬರನ್ನು ವಿವಾಹ ಆಗಿ ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ.