Don't Miss!
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಯ್ಯಪ್ಪನುಂ-ಕೋಶಿಯುಂ' ನಿರ್ದೇಶಕನಿಗೆ ಹೃದಯಾಘಾತ
ಅಯ್ಯಪ್ಪನುಂ-ಕೋಶಿಯುಂ ಇತ್ತೀಚಿನ ಸೂಪರ್ ಹಿಟ್ ಮಲಯಾಳಂ ಸಿನಿಮಾ. ಈ ಸುಂದರ ಸಿನಿಮಾದ ನಿರ್ದೇಶಕ ಹೃದಯಾಘಾತಕ್ಕೆ ತುತ್ತಾಗಿದ್ದಾರೆ.
Recommended Video
ಅಯ್ಯಪ್ಪನುಂ-ಕೋಶಿಯುಂ ಸಿನಿಮಾದ ನಿರ್ದೇಶಕ ಕೆ.ಆರ್.ಸಚ್ಚಿದಾನಂದ್ ಅವರಿಗೆ ನಿನ್ನೆ (ಜೂನ್ 16) ರಂದು ಬೆಳಿಗ್ಗೆ ಹೃದಯಾಘಾತವಾಗಿದ್ದು, ಅವರನ್ನು ತ್ರಿಶೂರ್ನ ಜೂಬ್ಲಿ ಮಿಷನ್ ಮೆಡಿಕಲ್ ಕಾಲೇಜ್ಗೆ ದಾಖಲು ಮಾಡಲಾಗಿದೆ.
ಕೆ.ಆರ್.ಸಚ್ಚಿದಾನಂದ್ ಅಥವಾ ಸಚ್ಚಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿ ವೆಂಟಿಲೇಟರ್ ನ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಹಲವು ರೀತಿಯ ಸ್ಕ್ಯಾನ್ಗಳು, ಪರೀಕ್ಷೆಗಳನ್ನು ಸಚ್ಚಿ ಅವರಿಗೆ ಮಾಡಿದ್ದಾಗಿ ಆಸ್ಪತ್ರೆ ಹೇಳಿದ್ದು, ಸಿಟಿ ಸ್ಕ್ಯಾನ್ ವರದಿ ಪ್ರಕಾರ ಸಚ್ಚಿ ಅವರಿಗೆ ಮೆದುಳಿಗೆ ಸಹ ಹಾನಿಯಾಗಿದೆಯಂತೆ. ಪ್ರಸ್ತುತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ 72 ಗಂಟೆ ನಂತರವೇ ಅವರ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ನೀಡಬಹುದಾಗಿ ಎಂದಿದ್ದಾರೆ.
ಪೃಥ್ವಿರಾಜ್ ಸುಕುಮಾರನ್, ಬಿಜು ಮೆನನ್ ನಟಿಸಿರುವ 'ಅಯ್ಯಪ್ಪನುಂ ಕೋಶಿಯುಂ' ಸಿನಿಮಾ ಮಲೆಯಾಳಂನಲ್ಲಿ ಸೂಪರ್ ಹಿಟ್ ಆಗಿದ್ದು, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ರೀಮೇಕ್ ಆಗುತ್ತಿದೆ. ಕನ್ನಡದಲ್ಲಿಯೂ ಸಿನಿಮಾವನ್ನು ರೀಮೇಕ್ ಮಾಡುವ ಸಾಧ್ಯತೆ ಇದೆ.