Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
29 ಲಕ್ಷ ಹಣ ವಂಚನೆ: ಸನ್ನಿ ಲಿಯೋನ್ ಹೇಳಿಕೆ ದಾಖಲಿಸಿಕೊಂಡ ಕೇರಳ ಪೊಲೀಸ್
ಕಾರ್ಯಕ್ರಮ ಆಯೋಜಕರೊಬ್ಬರಿಗೆ 29 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ದೂರಿನ ವಿಚಾರಣೆ ನಡೆಸುತ್ತಿರುವ ಕೇರಳ ಪೊಲೀಸರು ನಟಿ ಸನ್ನಿ ಲಿಯೋನ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ನಟಿ ಸನ್ನಿ ಲಿಯೋನ್ ಗೆ ತಾವು 29 ಲಕ್ಷ ಹಣ ಕೊಟ್ಟು ಎರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು, ಕಾರ್ಯಕ್ರಮಗಳಿಗೆ ಬರುತ್ತೇನೆಂದು ಹೇಳಿ ಹಣ ಪಡೆದ ನಟಿ ಸನ್ನಿ ಲಿಯೋನ್ ಆ ನಂತರ ಗೈರಾದರು. ನಟಿಯು ನನಗೆ 29 ಲಕ್ಷ ರೂ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಪೆರಂಬವೂರ್ ನ ಶಿಯಾಸ್ ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇತ್ತೀಚೆಗೆ ಕೆಲ ದಿನಗಳ ಹಿಂದೆ ನಟಿ ಸನ್ನಿ ಲಿಯೋನ್ ಚಿತ್ರೀಕರಣಕ್ಕೆಂದು ಕೇರಳದ ತಿರುವನಂತಪುರಂ ನ ತೂವೂರ್ ಗೆ ಬಂದಿದ್ದಾಗ ಅಲ್ಲಿಗೆ ತೆರಳಿದ ಎರ್ನಾಕುಲಂ ಪೊಲೀಸರು ಪ್ರಕರಣ ಸಂಬಂಧ ನಟಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಪೊಲೀಸರ ಬಳಿ ಹೇಳಿಕೆ ನೀಡಿರುವ ಸನ್ನಿ ಲಿಯೋನ್, 'ಆ ಕಾರ್ಯಕ್ರಮವು ಹಲವು ಬಾರಿ ಮುಂದೂಡಲ್ಪಟ್ಟಿತು. ನನ್ನ ಇತರೆ ಚಿತ್ರೀಕರಣ ಹಾಗೂ ಕಾರ್ಯಕ್ರಮಗಳಿಗೆ ಆ ಕಾರ್ಯಕ್ರಮ ತೊಡಕಾಗಿತ್ತು. ಕೊನೆಗೆ ಒಂದು ದಿನ ಕಾರ್ಯಕ್ರಮ ನಡೆದು ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ನನಗೆ ಆಯೋಜನರಿಂದ ಇನ್ನೂ 12.50 ಲಕ್ಷ ಹಣ ಪಾವತಿಯಾಗಬೇಕು' ಎಂದಿದ್ದಾರೆ.
2019 ರ ಪ್ರೇಮಿಗಳ ದಿನಾಚರಣೆ ದಿನಕ್ಕೆ ಕಾರ್ಯಕ್ರಮವನ್ನು ಆಯೋಜಿಸಿ ಸನ್ನಿ ಲಿಯೋನ್ ಗೆ ಸಂಭಾವನೆ ನೀಡಿ ಆಹ್ವಾನಿಸಲಾಗಿತ್ತು. ಆದರೆ ಆಕೆ ಆ ಕಾರ್ಯಕ್ರಮಕ್ಕೆ ಬರಲಿಲ್ಲ.
Recommended Video
ಈ ಹಿಂದೆ 2018 ರಲ್ಲಿ ನಟಿ ಸನ್ನಿ ಲಿಯೋನ್ ಕೇರಳದ ಕೊಚ್ಚಿಗೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ದಿನ ಕೊಚ್ಚಿಯಲ್ಲಿ ಸನ್ನಿ ಲಿಯೋನ್ ಅನ್ನು ನೋಡಲು ಜನಜಾತ್ರೆಯೇ ನೆರೆದಿತ್ತು. ಸಾವಿರಾರು ಮಂದಿ ಒಮ್ಮೆಲೆ ಸನ್ನಿಯನ್ನು ನೋಡಲು ಬಂದಿದ್ದದಿಂದ ಇಡೀಯ ನಗರದೆಲ್ಲೆಡೆ ಟ್ರಾಫ್ ಜಾಮ್ ಆಗಿತ್ತು. ಮಾರನೇಯ ದಿನ ಹಲವಾರು ದಿನಪತ್ರಿಕೆಗಳಲ್ಲಿ ಅದೇ ಪ್ರಮುಖ ಸುದ್ದಿಯಾಗಿಬಿಟ್ಟಿತ್ತು.