Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ನಟ!
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.
ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.
ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.
'ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
Recommended Video
ನಿನ್ನೆಯಷ್ಟೆ ಜೊತೆಗೆ ನಟಿಸಿದೆ: ಇಂದ್ರಜಿತ್ ಸುಕುಮಾರ್
ಅವರೊಂದಿಗೆ ಚಿತ್ರೀಕರಣದಲ್ಲಿದ್ದ ನಟ ಇಂದ್ರಜಿತ್ ಸುಕುಮಾರ್ ಟ್ವೀಟ್ ಮಾಡಿ, 'ಸುದ್ದಿ ಕೇಳಿ ತಲ್ಲಣಗೊಂಡಿದ್ದೇನೆ. ನಿನ್ನೆಯಷ್ಟೆ ಅವರೊಂದಿಗೆ ಚಿತ್ರೀಕರಣದಲ್ಲಿದ್ದೆ, ಅವರೊಂದಿಗೆ ನಟಿಸಿದೆ ಇಂದು ಈ ಸುದ್ದಿ ಕೇಳುತ್ತಿದ್ದೇನೆ. ಅವರ ಕುಟುಂಬಕ್ಕೆ ದುಃಖ ನುಂಗುವ ಶಕ್ತಿ ದೇವರು ಕೊಡಲಿ' ಎಂದಿದ್ದಾರೆ.