Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ಗೆ ಕೊರೊನಾ ಪಾಸಿಟಿವ್
ಮಲಯಾಳಂ ಯುವ ನಟ ಪೃಥ್ವಿರಾಜ್ ಸುಕುಮಾರನ್ಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಪೃಥ್ವಿರಾಜ್ ಸುಕುಮಾರನ್ಗೆ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣ ಮಾಡುತ್ತಿರುವ ಸಂದರ್ಭದಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಡಿಜೋ ಜೋಸ್ ನಿರ್ದೇಶನದ 'ಜನಗಣಮನ' ಸಿನಿಮಾ ಶೂಟಿಂಗ್ ಮಾಡಬೇಕಾದರೆ ಸೋಂಕು ದೃಢಪಟ್ಟಿದೆ ಎಂದು ತಿಳಿದಿದೆ.
'ಅವತಾರ್' ಶೈಲಿಯ ಚಿತ್ರಕ್ಕೆ ಸ್ಟಾರ್ ನಟ ಸಜ್ಜು, ಕನ್ನಡದಲ್ಲೂ ರಿಲೀಸ್!
'ಜನಗಣಮನ' ಚಿತ್ರದ ನಿರ್ದೇಶಕ ಡಿಜೋ ಜೋಸ್ ಅವರಿಗೂ ಕೊರೊನಾ ಸೋಂಕು ತಗುಲಿದೆ. ಪೃಥ್ವಿರಾಜ್ ಅವರಿಗೆ ರೋಗಲಕ್ಷಣಗಳು ಇರಲಿಲ್ಲ, ಆದರೂ ಪರೀಕ್ಷೆ ವೇಳೆ ಸೋಂಕು ಪತ್ತೆಯಾಗಿದೆ.
ನಟ ಮತ್ತು ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆ ಚಿತ್ರೀಕರಣ ಸ್ಥಗಿತಗೊಳಿಸಿರುವ ನಿರ್ಮಾಪಕರು, ಇಡೀ ಚಿತ್ರತಂಡವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಇನ್ನು ಇತ್ತೀಚಿಗಷ್ಟೆ ಕೇರಳ ರಾಜ್ಯ ಪ್ರಶಸ್ತಿ ಪಡೆದ ಸೂರಜ್ ವೆಂಜರನ್ಮೂಡು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದು, ಅವರನ್ನು ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಲಾಕ್ಡೌನ್ ಮಧ್ಯೆ ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ 'ಆದುಜೀವಿಥಮ್' ಚಿತ್ರತಂಡ ಜೋರ್ಡಾನ್ನಲ್ಲಿ ಸಿಲುಕಿಕೊಂಡಿತು. ನಂತರ ವಂದೇ ಭಾರತ್ ಕಾರ್ಯಾಚರಣೆಯಡಿ ವಿಶೇಷ ವಿಮಾನದಲ್ಲಿ ಭಾರತಕ್ಕೆ ಮರಳಿತ್ತು. ಈ ವೇಳೆ ಪೃಥ್ವಿರಾಜ್ ಅವರಿಗೆ ಕೊರೊನಾ ನೆಗಿಟಿವ್ ಇತ್ತು.