Don't Miss!
- Sports
ನ್ಯೂಜಿಲೆಂಡ್ ಕೇಂದ್ರೀಯ ಒಪ್ಪಂದದಿಂದ ಹೊರ ನಡೆದ ಟ್ರೆಂಟ್ ಬೌಲ್ಟ್! ಏಕೆ ಈ ನಿರ್ಧಾರ?
- News
ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಕೃಷಿಭೂಮಿ, ಹುಲಿಗೆಮ್ಮಾ ದೇವಾಲಯ ಜಲಾವೃತ
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಬಿಡುಗಡೆ!
- Lifestyle
ಚೀನಾದಲ್ಲಿ ಹೊಸ ಲಂಗ್ಯಾ ವೈರಸ್ ಪತ್ತೆ..! ಇದು ಸಾಂಕ್ರಾಮಿಕವೇ..? ಮಾರಣಾಂತಿಕವೇ..?
- Automobiles
ನಮ್ಮ ಬೆಂಗಳೂರಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೋಂಡಾ
- Finance
ಸೆನ್ಸೆಕ್ಸ್ ಕುಸಿತ, ನಿಫ್ಟಿ ಏರಿಕೆ: ಬುಧವಾರ ವಹಿವಾಟಿನ ಅಂತ್ಯ ಹೀಗಿದೆ
- Travel
ಭಾರತದಲ್ಲಿಯ 10 ಪ್ರಸಿದ್ದ ಹನುಮಂತ ದೇವರ ದೇವಾಲಯಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಕೊಟ್ಟ ಸಾಲ ವಾಪಸ್ ಕೇಳಿದವನ ಮೇಲೆ ನಟನ ದಾಳಿ! ಬಂಧನ
ಮಲಯಾಳಂನ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಪೋಷಕ ನಟನೊ ವಿನೀತ್ ತಟ್ಟಿಲ್ ಅನ್ನು ಕೇರಳ ಪೊಲೀಸರು ಕೊಲೆ ಆರೋಪದ ಮೇಲೆ ಬಂಧಿಸಿದ್ದಾರೆ.
ನಟ ವಿನೀತ್, ತನ್ನ ಗೆಳೆಯನಾಗಿದ್ದ ಅಲೆಕ್ಸ್ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ತ್ರಿಶೂರ್ ಪೊಲೀಸರು ವಿನೀತ್ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ನಟ ವಿನೀತ್, ಅಲೆಕ್ಸ್ನಿಂದ ಆರು ಲಕ್ಷ ರುಪಾಯಿ ಹಣ ಸಾಲ ಪಡೆದಿದ್ದನಂತೆ, ಮೂರು ಲಕ್ಷ ಹಣವನ್ನು ಹಿಂತಿರುಗಿಸಿದ್ದಾನೆ ಸಹ. ಬಾಕಿ ಮೂರು ಲಕ್ಷ ಹಣವನ್ನು ಕೇಳಲು ಅಲೆಕ್ಸ್ ವಿನೀತ್ ಮನೆಗೆ ಹೋಗಿದ್ದಾಗ ಇಬ್ಬರ ನಡುವೆ ಮಾತಿಗೆ-ಮಾತು ಬೆಳೆದು ವಿನೀತ್, ಅಲೆಕ್ಸ್ ಮೇಲೆ ದಾಳಿ ಮಾಡಿದ್ದಾನೆ.
ಗಾಯಗೊಂಡಿದ್ದ ಅಲೆಕ್ಸ್, ತ್ರಿಶೂರ್ ಪೊಲೀಸ್ ಠಾಣೆಯಲ್ಲಿ ನಟ ವಿನೀತ್ ವಿರುದ್ಧ ದೂರು ನೀಡಿದ್ದು, ಕೊಲ್ಲಲು ಯತ್ನಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರು ಸಹ ಕೊಲೆಗೆ ಯತ್ನ ಎಂದೇ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಘಟನೆಯು ಭಾನುವಾರ ನಡೆದಿದ್ದು ತ್ರಿಶೂರ್ ಪೊಲೀಸರು ಸೋಮವಾರ ನಟನನ್ನು ವಶಕ್ಕೆ ಪಡೆಸಿದ್ದಾರೆ. ಪ್ರಾಥಮಿಕ ವಿಚಾರಣೆ ಬಳಿಕ ಮಂಗಳವಾರ ನಟನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ. ನಟ ವಿನೀತ್ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿನೀತ್, ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಾದ 'ಅಂಗಮಲೈ ಡೈರೀಸ್', 'ಅಯ್ಯಪ್ಪನುಂ ಕೋಶಿಯುಂ', 'ತ್ರಿಶೂರ್ ಪೂರಂ' ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.