Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಎಂಬುದು ಜೋಕ್: ಅಡೂರು ಗೋಪಾಲಕೃಷ್ಣನ್
ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿರುವ ಅಡೂರು ಗೋಪಾಲಕೃಷ್ಣನ್ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕಟುವಾಗಿ ಟೀಕಿಸಿದ್ದಾರೆ.
ಸಿನಿಮಾಗಳನ್ನು ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡುವವರನ್ನು 'ಬಾಲಿವುಡ್ ಅಭಿಮಾನಿಗಳು' ಎಂದಿರುವ ಅಡೂರು ಗೋಪಾಕೃಷ್ಣನ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಎಂಬುದೇ ಇತ್ತೀಚಿನ ವರ್ಷಗಳಲ್ಲಿ ಜೋಕ್ ಆಗಿ ಪರಿಣಮಿಸಿದೆ ಎಂದಿದ್ದಾರೆ.
ಸಿನಿಮಾಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಜ್ಯೂರಿಗಳಿಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಮಾನದಂಡಗಳು ಸಹ ಗೊತ್ತಿಲ್ಲ. ಕಮರ್ಷಿಯಲ್ ಮಸಾಲಾ ಸಿನಿಮಾಗಳನ್ನು ಸಹ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸಿನಿಮಾಗಳನ್ನು ನಿರ್ಮಾಣದ ಹಿಂದಿನ ಉದ್ದೇಶ ಸಹ ಅವರಿಗೆ ಗೊತ್ತಿಲ್ಲ ಎಂದಿದ್ದಾರೆ.
ಈ ಹಿಂದೆ ಆಯ್ಕೆ ಸಮಿತಿಯಲ್ಲಿ ಜನಪ್ರಿಯ ಸಿನಿಮಾ ನಿರ್ದೇಶಕರು, ರಂಗಭೂಮಿಯಲ್ಲಿ ದಶಕಗಳ ಕಾಲ ಕೆಲಸ ಮಾಡಿದವರು ಸದಸ್ಯರಾಗಿರುತ್ತಿದ್ದರು. ಆದರೆ ಈಗ ಯಾರು ಜ್ಯೂರಿಗಳಾಗುತ್ತಿದ್ದಾರೆ ಎಂಬುದು ಸಹ ಗೊತ್ತಾಗುತ್ತಿಲ್ಲ. ಅನುಭವ ಇಲ್ಲದ, ವಿಷಯ ಜ್ಞಾನ ಇಲ್ಲದವರನ್ನು ಸಹ ಜ್ಯೂರಿಗಳನ್ನಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.
2015 ರಲ್ಲಿ ಸಹ ಅಡೂರು ಗೋಪಾಲಕೃಷ್ಣನ್ ಅವರು ರಾಷ್ಟ್ರ ಪ್ರಶಸ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆಗ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಪತ್ರ ಬರೆದಿದ್ದರು ಅಡೂರು ಗೋಪಾಲಕೃಷ್ಣನ್. ಆಗಲೂ ಸಹ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಸಿನಿಮಾ ನಿರ್ದೇಶಕ ಪ್ರಶಸ್ತಿಗಳು ಕಮರ್ಷಿಯಲ್ ಸಿನಿಮಾಕ್ಕೆ ಹೋಗಿದ್ದವು.
ಕೆಲವು ದಿನಗಳ ಹಿಂದಷ್ಟೆ ಕೇಂದ್ರ ಸರ್ಕಾರದ ವಿರುದ್ಧವೂ ಅಡೂರು ಗೋಪಾಲಕೃಷ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದರು. ''ಕೇಂದ್ರ ಸರ್ಕಾರವು ನನ್ನನ್ನು ಶತ್ರುವಿನಂತೆ ನೋಡುತ್ತದೆ. ನಾನು ನನ್ನ ಸಿನಿಮಾಗಳ ಮೂಲಕ ನನ್ನ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ ಅವು ಕೇಂದ್ರ ಸರ್ಕಾರದ ಆದರ್ಶಗಳ ವಿರುದ್ಧ ಇವೆ'' ಎಂದಿದ್ದಾರೆ ಅಡೂರು.
ಅಡೂರು ಗೋಪಾಲಕೃಷ್ಣನ್ ಅವರು ಮಲಯಾಳಂ ಸಿನಿಮಾ ನಿರ್ದೇಶಕರಾಗಿದ್ದು, ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುತ್ತದೆ. ಈ ವರೆಗೆ ನಿರ್ದೇಶಿಸಿರುವುದು ಕೇವಲ 12 ಪೂರ್ಣ ಪ್ರಮಾಣದ ಸಿನಿಮಾಗಳನ್ನಷ್ಟೆ ಅವರು ಮಾಡಿದ್ದಾರೆ. ಆದರೆ ಅವರ ಸಿನಿಮಾಗಳು ಹಲವು ರಾಷ್ಟ್ರಪ್ರಶಸ್ತಿ, ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿವೆ. ಅಡೂರು ಗೋಪಾಲಕೃಷ್ಣನ್ ಅವರಿಗೆ ಪದ್ಮ ವಿಭೂಷಣ ಗೌರವ ಸಹ ನೀಡಲಾಗಿದೆ.