Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಎಂಬುದು ಜೋಕ್: ಅಡೂರು ಗೋಪಾಲಕೃಷ್ಣನ್
ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿರುವ ಅಡೂರು ಗೋಪಾಲಕೃಷ್ಣನ್ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕಟುವಾಗಿ ಟೀಕಿಸಿದ್ದಾರೆ.
ಸಿನಿಮಾಗಳನ್ನು ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡುವವರನ್ನು 'ಬಾಲಿವುಡ್ ಅಭಿಮಾನಿಗಳು' ಎಂದಿರುವ ಅಡೂರು ಗೋಪಾಕೃಷ್ಣನ್, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಎಂಬುದೇ ಇತ್ತೀಚಿನ ವರ್ಷಗಳಲ್ಲಿ ಜೋಕ್ ಆಗಿ ಪರಿಣಮಿಸಿದೆ ಎಂದಿದ್ದಾರೆ.
ಸಿನಿಮಾಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಜ್ಯೂರಿಗಳಿಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಮಾನದಂಡಗಳು ಸಹ ಗೊತ್ತಿಲ್ಲ. ಕಮರ್ಷಿಯಲ್ ಮಸಾಲಾ ಸಿನಿಮಾಗಳನ್ನು ಸಹ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸಿನಿಮಾಗಳನ್ನು ನಿರ್ಮಾಣದ ಹಿಂದಿನ ಉದ್ದೇಶ ಸಹ ಅವರಿಗೆ ಗೊತ್ತಿಲ್ಲ ಎಂದಿದ್ದಾರೆ.
ಈ ಹಿಂದೆ ಆಯ್ಕೆ ಸಮಿತಿಯಲ್ಲಿ ಜನಪ್ರಿಯ ಸಿನಿಮಾ ನಿರ್ದೇಶಕರು, ರಂಗಭೂಮಿಯಲ್ಲಿ ದಶಕಗಳ ಕಾಲ ಕೆಲಸ ಮಾಡಿದವರು ಸದಸ್ಯರಾಗಿರುತ್ತಿದ್ದರು. ಆದರೆ ಈಗ ಯಾರು ಜ್ಯೂರಿಗಳಾಗುತ್ತಿದ್ದಾರೆ ಎಂಬುದು ಸಹ ಗೊತ್ತಾಗುತ್ತಿಲ್ಲ. ಅನುಭವ ಇಲ್ಲದ, ವಿಷಯ ಜ್ಞಾನ ಇಲ್ಲದವರನ್ನು ಸಹ ಜ್ಯೂರಿಗಳನ್ನಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.
2015 ರಲ್ಲಿ ಸಹ ಅಡೂರು ಗೋಪಾಲಕೃಷ್ಣನ್ ಅವರು ರಾಷ್ಟ್ರ ಪ್ರಶಸ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆಗ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಪತ್ರ ಬರೆದಿದ್ದರು ಅಡೂರು ಗೋಪಾಲಕೃಷ್ಣನ್. ಆಗಲೂ ಸಹ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಸಿನಿಮಾ ನಿರ್ದೇಶಕ ಪ್ರಶಸ್ತಿಗಳು ಕಮರ್ಷಿಯಲ್ ಸಿನಿಮಾಕ್ಕೆ ಹೋಗಿದ್ದವು.
ಕೆಲವು ದಿನಗಳ ಹಿಂದಷ್ಟೆ ಕೇಂದ್ರ ಸರ್ಕಾರದ ವಿರುದ್ಧವೂ ಅಡೂರು ಗೋಪಾಲಕೃಷ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದರು. ''ಕೇಂದ್ರ ಸರ್ಕಾರವು ನನ್ನನ್ನು ಶತ್ರುವಿನಂತೆ ನೋಡುತ್ತದೆ. ನಾನು ನನ್ನ ಸಿನಿಮಾಗಳ ಮೂಲಕ ನನ್ನ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ ಅವು ಕೇಂದ್ರ ಸರ್ಕಾರದ ಆದರ್ಶಗಳ ವಿರುದ್ಧ ಇವೆ'' ಎಂದಿದ್ದಾರೆ ಅಡೂರು.
ಅಡೂರು ಗೋಪಾಲಕೃಷ್ಣನ್ ಅವರು ಮಲಯಾಳಂ ಸಿನಿಮಾ ನಿರ್ದೇಶಕರಾಗಿದ್ದು, ಭಾರತದ ಅತ್ಯುತ್ತಮ ಸಿನಿಮಾ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುತ್ತದೆ. ಈ ವರೆಗೆ ನಿರ್ದೇಶಿಸಿರುವುದು ಕೇವಲ 12 ಪೂರ್ಣ ಪ್ರಮಾಣದ ಸಿನಿಮಾಗಳನ್ನಷ್ಟೆ ಅವರು ಮಾಡಿದ್ದಾರೆ. ಆದರೆ ಅವರ ಸಿನಿಮಾಗಳು ಹಲವು ರಾಷ್ಟ್ರಪ್ರಶಸ್ತಿ, ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನವಾಗಿವೆ. ಅಡೂರು ಗೋಪಾಲಕೃಷ್ಣನ್ ಅವರಿಗೆ ಪದ್ಮ ವಿಭೂಷಣ ಗೌರವ ಸಹ ನೀಡಲಾಗಿದೆ.