Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಸೆಟ್ ಹಾಳು: ಭಜರಂಗದಳ ಜಿಲ್ಲಾಧ್ಯಕ್ಷನ ಬಂಧನ
ಸಿನಿಮಾ ಒಂದಕ್ಕಾಗಿ ಹಾಕಿದ್ದ ಸೆಟ್ನಲ್ಲಿ ದಾಂಧಲೆ ನಡೆಸಿ, ಸೆಟ್ ಅನ್ನು ಹಾಳುಗೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳ ಜಿಲ್ಲಾಧ್ಯಕ್ಷ ಸೇರಿ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
Recommended Video
ಕೇರಳದ ಪೆರಿಯಾರ್ ನದಿಯ ದಂಡೆಯಲ್ಲಿ ಮಲೆಯಾಳಂ ಸಿನಿಮಾ 'ಮಿನ್ನಲ್ ಮುರಲಿ' ಸೆಟ್ ಹಾಕಲಾಗಿತ್ತು. ಕೆಲವು ದುಷ್ಕರ್ಮಿಗಳು ಅದನ್ನು ಹಾಳೆಗೆಡವಿದ್ದಾರೆ.
ಕೊರೊನಾ ಭೀತಿ ನಡುವೆಯೇ ಬಿಗ್ಬಾಸ್ ಸ್ಪರ್ಧಿಗೆ ಭರ್ಜರಿ ಸ್ವಾಗತ: ಬುಕ್ ಆಯ್ತು ಕೇಸ್
ಮಿನ್ನಲ್ ಮುರಲಿ ಸಿನಿಮಾಕ್ಕಾಗಿ ಚರ್ಚ್ ಮಾದರಿಯ ಸೆಟ್ ಅನ್ನು ಹಾಕಲಾಗಿತ್ತು. ಅದನ್ನು ದುಷ್ಕರ್ಮಿಗಳು ಸುತ್ತಿಗೆ ಇನ್ನಿತರ ಆಯುಧಗಳೊಂದಿಗೆ ಸೆಟ್ ಮೇಲೆ ದಾಳಿ ನಡೆಸಿ ಒಡೆದು ಹಾಕಿದ್ದಾರೆ. ಸೆಟ್ ಅನ್ನು ಒಡೆದು ಹಾಕುತ್ತಿರುವ ಚಿತ್ರಗಳನ್ನು ಚಿತ್ರದ ನಟ, ತಂತ್ರಜ್ಞರು ಹಂಚಿಕೊಂಡಿದ್ದಲ್ಲದೆ, ಸೆಟ್ ಒಡೆದುಹಾಕಿದ್ದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಖಂಡಿಸಿದ ಕೇರಳ ಸಿಎಂ ವಿಜಯನ್
ಕೇರಳ ಸಿಎಂ ಪಿಣರಾಯಿ ವಿಜಯನ್ ಸಹ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, 'ಈ ರೀತಿಯ ಕೋಮು ಗಲಾಟೆಗೆ ಕೇರಳದಲ್ಲಿ ಜಾಗವಿಲ್ಲ. ಸೆಟ್ ಅನ್ನು ಲಕ್ಷಾಂತರ ವ್ಯಯಿಸಿ ಮಾರ್ಚ್ನಲ್ಲಿ ನಿರ್ಮಿಸಲಾಗಿತ್ತು, ಲಾಕ್ಡೌನ್ನಿಂದಾಗಿ ಚಿತ್ರೀಕರಣ ಬಂದ್ ಮಾಡಲಾಗುತ್ತು. ಈಗ ಕೋಮುವಾದಿಗಳು ಸೆಟ್ ಅನ್ನು ಒಡೆದುಹಾಕಿದ್ದಾರೆ. ಆದರೆ ಕೇರಳ ರಾಜ್ಯ ಇದನ್ನು ಸಹಿಸುವುದಿಲ್ಲ' ಎಂದಿದ್ದಾರೆ.
ಫೆಸ್ಬುಕ್ನಲ್ಲಿ ಪೋಸ್ಟ್
ಅಂತರಾಷ್ಟ್ರ ಹಿಂದು ಪರಿಷದ್ ಗೆ ಸೇರಿದ ಹರಿ ಪಲೋಡೆ ಎಂಬಾತ, ಸೆಟ್ ಅನ್ನು ಒಡೆದು ಹಾಕಿದ ಕಾರ್ಯವನ್ನು ಹೆಮ್ಮೆಯಿಂದ ಹೇಳಿಕೊಂಡಿದ್ದು. ಭಜರಂಗದಳ ಜಿಲ್ಲಾ ಅಧ್ಯಕ್ಷನಿಗೆ ಫೇಸ್ಬುಕ್ನಲ್ಲಿ ಧನ್ಯವಾದ ಹೇಳಿದ್ದಾನೆ. ಇದರ ಆಧಾರದಲ್ಲಿ ಆತನನ್ನು ಜೊತೆಗೆ ಸೆಟ್ ಅನ್ನು ಒಡೆದು ಹಾಕಿದ ಇನ್ನೂ ಕೆಲವರನ್ನು ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ಲಾಕ್ಡೌನ್ ನಿಯಮ ಪಾಲಿಸಿ ಸರಳ ವಿವಾಹದ ಮೂಲಕ ಮಾದರಿಯಾದ ನಟ
ಸೆಟ್ ನ ಸಮೀಪದಲ್ಲಿ ದೇವಸ್ಥಾನ ಇತ್ತು
ಸೆಟ್ ಅನ್ನು ನಿರ್ಮಾಣ ಮಾಡಿದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ಮಹದೇವ ದೇವಸ್ಥಾನ ಇತ್ತು. ಹಾಗಾಗಿ ಸೆಟ್ ಅನ್ನು ತೆಗೆದು ಹಾಕುವಂತೆ ಭಜರಂಗದಳ ಮತ್ತು ಇನ್ನೂ ಕೆಲವು ಹಿಂದು ಸಂಘಟನೆಗಳು ಒತ್ತಾಯ ಹೇರಿದ್ದವು. ಕೊನೆಗೆ ಅವರೇ ಸುತ್ತಿಗೆ, ಪಿಕಾಸಿಗಳನ್ನು ಹಿಡಿದು ಸೆಟ್ ಅನ್ನು ಒಡೆದು ಹಾಕಿದ್ದಾರೆ.
ಕ್ಲೈಮ್ಯಾಕ್ಸ್ ಚಿತ್ರೀಕರಣ ಬಾಕಿ ಇತ್ತು
'ಮಿನಾಲ್ ಮುರಲಿ' ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿತ್ತು, ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ಪೆರಿಯಾರ್ ನದಿಯ ದಂಡೆಯ ಮೇಲೆ ಚರ್ಚ್ ನ ಸೆಟ್ ಅನ್ನು ಮಾರ್ಚ್ನಲ್ಲಿ ಹಾಕಲಾಗಿತ್ತು. ಆದರೆ ಲಾಕ್ಡೌನ್ ಆದ ಕಾರಣ ಚಿತ್ರೀಕರಣ ನಡೆಸಲಾಗದೆ, ಸೆಟ್ ಅನ್ನು ಹಾಗೆಯೇ ಬಿಡಲಾಗಿತ್ತು. ಈಗ ಅದನ್ನು ಒಡೆದು ಹಾಕಲಾಗಿದೆ.
ಕನ್ನಡ ಸಿನಿಮಾಕ್ಕಾಗಿ ದೇಶವೇ ಕಾಯುತ್ತಿದೆ: ಕುತೂಹಲ ಪ್ರಕಟಿಸಿರುವ ರಾಜ್ಯಗಳ ಪಟ್ಟಿ