ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ಶ್ರೀನಾಥ್ ಮತ್ತು ಆರತಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಆರತಿ ನಾಯಕಿಯಾಗಿ ನಟಿಸುವುದರೊಂದಿಗೆ ಚಿತ್ರವನ್ನು ನಿರ್ಮಾಣ ಮಾಡಿದ್ದರು. ವಿಜಯ ನಾರಸಿಂಹ ಸಾಹಿತ್ಯದಲ್ಲಿ ಮೂಡಿಬಂದ ಗೀತೆಗಳಿಗೆ ಉಪೇಂದ್ರಕುಮಾರ್ ಸಂಗೀತ ನೀಡಿದ್ದರು. ಸತ್ಯಪ್ರಿಯಾ, ಸತ್ಯಭಾಮಾ, ಮುಸರಿ ಕೃಷ್ಣಮೂರ್ತಿ ಮುಂತಾದವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.