ಮಾರಕಾಸ್ತ್ರ ಸಿನಿಮಾವನ್ನು ಚೊಚ್ಚಲ ಬಾರಿಗೆ ಗುರುಮೂರ್ತಿ ಸುನಾಮಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸಿಸುತ್ತಿದ್ದಾರೆ. 2017ರಲ್ಲಿ 'ಉಪ್ಪು ಹುಳಿ ಖಾರ' ಚಿತ್ರದಲ್ಲಿ ನಟಿಸಿದ್ದ ಮಾಲಾಶ್ರೀ ಮತ್ತೆ ಯಾವ ಸಿನಿಮಾದಲ್ಲಿ ನಟಿಸಿರಲಿಲ್ಲ. ಸದ್ಯ ಈ ಚಿತ್ರದ ಮೂಲಕ 6 ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದು, ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ಹರ್ಷಿಕಾ ಪೂರ್ಣಚ್ಚ ಈ ಸಿನಿಮಾದಲ್ಲಿ ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ಉಳಿದಂತೆ ಆನಂದ್ ಆರ್ಯ, ಭಗತ್ ಸಿಂಗ್, ಉಗ್ರಂ ಮಂಜು ಮುಂತಾದವರು ಚಿತ್ರದಲ್ಲಿದ್ದಾರೆ. ಈ ಚಿತ್ರಕ್ಕೆ ಮಂಜು ಕವಿ ಸಂಗೀತ ನೀಡಿದ್ದು, ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ. ನಟರಾಜ್ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಮಾರಕಾಸ್ತ್ರ ಸಿನಿಮಾ ಅಕ್ಟೋಬರ್ 13ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.