ಕೆ.ಎಸ್.ಆರ್.ದಾಸ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಷ್ಣುವರ್ಧನ್, ರಜನಿಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ನಾಯಕಿಯರಾಗಿ ಪದ್ಮಪ್ರಿಯಾ, ಕವಿತಾ, ಜಯಮಾಲಿನಿ ನಟಿಸಿದ್ದರು. ಚಿತ್ರಕ್ಕೆ ಚೆಲ್ಲಪಿಲ್ಲ ಸತ್ಯಂ ಸಂಗೀತ ನೀಡಿದ್ದರು.
ಬಾಲ್ಯದಲ್ಲಿ ಬೇರೆಯಾದ ಇಬ್ಬರು ಸಹೋದರರು ಬೇರೆ ವಾತಾವರಣದಲ್ಲಿ ಬೆಳೆದು ಪರಸ್ಪರ ವಿರುದ್ಧವಾಗಿ ಹೋರಾಡಲು ನಿಲ್ಲುತ್ತಾರೆ. ನಂತರ ತಾವು ಪರಸ್ಪರ ಸಹೋದರರೆಂದು ಅರಿತು ಬಾಲ್ಯದಲ್ಲಿ ತಮ್ಮ ಕುಟುಂಬಕ್ಕೆ ಅನ್ಯಾಯ ಮಾಡಿದ್ದವರ ವಿರುದ್ದ ಸಿಡಿದೇಳುತ್ತಾರೆ.