ತ್ರಿವೇಣಿಯವರ ಶರಪಂಜರ ಕಾದಂಬರಿ ಆಧಾರಿತ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದರು. ಕಲ್ಪನಾ, ಗಂಗಾಧರ್, ಲೀಲಾವತಿ ಮತ್ತು ಕೆ.ಎಸ್.ಅಶ್ವಥ್ ಪ್ರಮುಖ ಪಾತ್ರಗಳಲ್ಲಿ ನಟಿಸಿದರು. ಈ ಚಿತ್ರ ಕರ್ನಾಟಕ ರಾಜ್ಯ ಪ್ರಶಸ್ತಿಯೊಂದಿಗೆ ರಾಷ್ಟ್ರ ಪ್ರಶಸ್ತಿ ಕೂಡ ಪಡೆಯಿತು.
ವೈವಾಹಿಕ ಸಂಬಂಧ, ಮತ್ತು ಅನೈತಿಕೆ ಮುಂತಾದ ವಿಷಯಗಳ ಮೇಲೆ ಚಿತ್ರ ಬೆಳಕು ಚೆಲ್ಲುತ್ತದೆ.