ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ 'ತನುಜಾ' ಸಿನಿಮಾ ಕೊರೋನಾ ಹಾವಳಿ ವೇಳೆ ನಡೆದ ನೈಜ ಘಟನೆಯನ್ನು ಆಧರಿಸಿದೆ. ಕೊರೊನಾ ಸಂದರ್ಭದಲ್ಲಿ ಶಿವಮೊಗ್ಗದ ಕುಗ್ರಾಮವೊಂದರಿಂದ ಬೆಂಗಳೂರಿಗೆ ಬಂದು ತನುಜಾ ಎಂಬ ಯುವತಿ ನೀಟ್ ಪರೀಕ್ಷೆ ಬರೆದಿದ್ದರು. ಆ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆಯಲು ಅಂದು ನೆರವಾಗಿದ್ದು, ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್. ಇವರೊಂದಿಗೆ ಪತ್ರಕರ್ತ ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ನೆರವು ನೀಡಿದ್ದರು.
ಇದನ್ನು ಸಿನಿಮಾವಾಗಿ ಮಾಡಲಾಗಿದೆ.
ತನುಜಾ ಸಿನಿಮಾದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಬಿ.ಎಸ್.ಯಡಿಯೂರಪ್ಪ ಕೂಡ ನಟಿಸಿದ್ದಾರೆ. ಉಳಿದಂತೆ ಈ ಸಿನಿಮಾದಲ್ಲಿ ಸಪ್ತ ಪಾವೂರ್, ರಾಜೇಶ್ ನಟರಂಗ ಸೇರಿದಂತೆ ಹಲವರು ನಟಿಸಿದ್ದಾರೆ.
ಕಥೆ: ಈ ಸಿನಿಮಾದಲ್ಲಿ ಕೊರೊನಾ ವೇಳೆ ವಿದ್ಯಾರ್ಥಿನಿಯೊಬ್ಬರು ಬೆಂಗಳೂರಿಗೆ ಬಂದು ನೀಟ್ ಬರೆದು ಎಂಬಿಬಿಎಸ್ ಸೇರಿದ ಘಟನೆಯನ್ನು ತೋರಿಸಲಾಗಿದೆ.