'ತತ್ಸಮ ತದ್ಭವ' ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಸ್ಯಾಂಡಲ್ವುಡ್ಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಹೊಸ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹ್ಯಾಪಿ ನ್ಯೂ ಇಯರ್, ಪ್ರೆಂಚ್ ಬಿರಿಯಾನಿ ಸಿನಿಮಾಗಳನ್ನ ನಿರ್ದೇಶನ ಪನ್ನಗಭರಣ ಅವರು 'ತತ್ಸಮ ತದ್ಭವ' ಚಿತ್ರಕ್ಕೆ ಹಣ ಹಾಕಿದ್ದಾರೆ. ಇವರ ಜೊತೆಗೆ ಸ್ಫೂರ್ತಿ ಅನಿಲ್ ಕೂಡ ಹಣ ಹೂಡಿದ್ದಾರೆ. ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ ಮಾಡಿದ್ದಾರೆ. ರವಿ ಆರಾಧ್ಯ ಸಂಕಲನ ಮಾಡಿದ್ದಾರೆ.
ಎರಡು ಭಾಷೆಯಲ್ಲಿ ಸಿನಿಮಾ ಬಿಡುಗಡೆ: ಮೇಘನಾ ರಾಜ್ ಕನ್ನಡದ ಜೊತೆ ಮಲಯಾಳಂ ಸಿನಿಮಾಗಳಲ್ಲೂ ಜನಪ್ರಿಯತೆ ಪಡೆದಿದ್ದಾರೆ. ಹೀಗಾಗಿ ಈ ಸಿನಿಮಾ ಕನ್ನಡ ಹಾಗೂ ಮಲಯಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಫಸ್ಟ್ ಲುಕ್ ಕೂಡ ಎರಡು ಭಾಷೆಯಲ್ಲಿ ಬಿಡುಗಡೆಯಾಗಿದೆ.