ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಈ ಚಿತ್ರದಲ್ಲಿ ಬಸವರಾಜ್, ಕೆ,ಎಸ್.ಅಶ್ವಥ್, ಸುಧೀರ್, ವಜ್ರಮುನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಮಂಜುಳಾ, ಅನುರಾಧಾ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು. ಚಿತ್ರಕ್ಕೆ ಟಿ.ಜಿ.ಲಿಂಗಪ್ಪ ಸಂಗೀತ ನೀಡಿದರು.
ಈ ಚಿತ್ರ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗ ಸಿಂದೂರಿನಲ್ಲಿ ಜನಿಸಿದ ಸ್ವಾತಂತ್ರ ಹೋರಾಟಗಾರ ಲಕ್ಷ್ಮಣನ ಕಥೆ ಹೇಳುತ್ತದೆ. ತನ್ನದೇ ಒಂದು ತಂಡ ಕಟ್ಟಿಕೊಂಡು ಬ್ರಿಟಿಷ್ ಕಚೇರಿಗಳನ್ನು ಲೂಟಿ ಮಾಡಿ ಬಡವರಿಗೆ ಹಂಚುತ್ತಿದ್ದ. ಬ್ರಿಟಿಷರು ಹೊಂಚು ಹಾಕಿ ರಾತ್ರಿ ಊಟ ಮಾಡುವಾಗ ಮೋಸದಿಂದ ಕೊಂದರು. ಕೇವಲ 24 ನೆ ವಯಸ್ಸಿನಲ್ಲಿ ಮಡಿದ ಈ ಸ್ವಾತಂತ್ರ ಹೋರಾಟಗಾರನ ಕುರಿತು ಹಲವಾರು ನಾಟಕ ಮತ್ತು ಜಾನಪದ ಸಾಹಿತ್ಯಗಳು ಮೂಡಿ ಬಂದಿವೆ.