Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಝೇಂಕಾರ್ ಮ್ಯೂಸಿಕ್ ಮಾಲೀಕ ಸುರೇಶ್ ಜೈನ್ ಇನ್ನಿಲ್ಲ
ಬೆಂಗಳೂರು ಕತ್ರಿಗುಪ್ಪೆಯ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸುರೇಶ್ ಇಹಲೋಹ ತ್ಯಜಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಸುರೇಶ್ ಜೈನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತಮ್ಮ ಅನಾರೋಗ್ಯದ ನಡುವೆಯೂ 'ಚಿರು' ಚಿತ್ರವನ್ನು ನಿರ್ಮಿಸಿದ ಖ್ಯಾತಿ ಅವರದು.
ಝೇಂಕಾರ್ ಆಡಿಯೋ ಕಂಪನಿ ಹಾಗೂ ಮಾರ್ಸ್ ರೆಕಾರ್ಡಿಂಗ್ ಸ್ಟುಡಿಯೋಗಳನ್ನು ಕಟ್ಟಿದ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ನೂರಾರು ಕನ್ನಡ ಚಿತ್ರಗಳ ಆಡಿಯೋ ರೈಟ್ಸ್ನನ್ನು ತಮ್ಮದಾಗಿಸಿಕೊಂಡಿದ್ದ ಝೇಂಕಾರ್ ಕಂಪನಿ ಉಳಿದ ಆಡಿಯೋ ಕಂಪನಿಗಳಿಗೆ ಪ್ರಬಲ ಸ್ಪರ್ಧಿಯಾಗಿತ್ತು.
ಮೂರು ದಶಕಗಳಿಂದ ಝೇಂಕಾರ್ ಆಡಿಯೋ ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸಿದ ಹೆಗ್ಗಳಿಕೆ ಸುರೇಶ್ ಜೈನ್ ಅವರದು. ಆಡಿಯೋ ಕಂಪನಿಯನ್ನು ಮುನ್ನಡೆಸುವ ಜೊತೆಗೆ ಅವರು ಕೆಲವು ಸದಭಿರುಚಿಯ ಕನ್ನಡ ಚಿತ್ರಗಳನ್ನು ನಿರ್ಮಿಸಿದರು. ಪ್ರೀತಿಸಲೇಬೇಕು, ನಿನಗೋಸ್ಕರ, ಮುಸ್ಸಂಜೆ ಮಾತು, ಚಿರು ಅವರ ನಿರ್ಮಾಣದ ಚಿತ್ರಗಳು. ಇಂದು ಬೆಂಗಳೂರಿನಲ್ಲಿ ಜೈನ ವಿಧಿವಿಧಾನಗಳ ಪ್ರಕಾರ ಅವರ ಅಂತ್ಯಕ್ರಿಯೆ ನೆರವೇರಲಿದೆ. (ಒನ್ಇಂಡಿಯಾ ಕನ್ನಡ)