Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಝೇಂಕಾರ್ ಮ್ಯೂಸಿಕ್ ಮಾಲೀಕ ಸುರೇಶ್ ಜೈನ್ ಇನ್ನಿಲ್ಲ
ಬೆಂಗಳೂರು ಕತ್ರಿಗುಪ್ಪೆಯ ನಿವಾಸದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸುರೇಶ್ ಇಹಲೋಹ ತ್ಯಜಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಸುರೇಶ್ ಜೈನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತಮ್ಮ ಅನಾರೋಗ್ಯದ ನಡುವೆಯೂ 'ಚಿರು' ಚಿತ್ರವನ್ನು ನಿರ್ಮಿಸಿದ ಖ್ಯಾತಿ ಅವರದು.
ಝೇಂಕಾರ್ ಆಡಿಯೋ ಕಂಪನಿ ಹಾಗೂ ಮಾರ್ಸ್ ರೆಕಾರ್ಡಿಂಗ್ ಸ್ಟುಡಿಯೋಗಳನ್ನು ಕಟ್ಟಿದ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ನೂರಾರು ಕನ್ನಡ ಚಿತ್ರಗಳ ಆಡಿಯೋ ರೈಟ್ಸ್ನನ್ನು ತಮ್ಮದಾಗಿಸಿಕೊಂಡಿದ್ದ ಝೇಂಕಾರ್ ಕಂಪನಿ ಉಳಿದ ಆಡಿಯೋ ಕಂಪನಿಗಳಿಗೆ ಪ್ರಬಲ ಸ್ಪರ್ಧಿಯಾಗಿತ್ತು.
ಮೂರು ದಶಕಗಳಿಂದ ಝೇಂಕಾರ್ ಆಡಿಯೋ ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸಿದ ಹೆಗ್ಗಳಿಕೆ ಸುರೇಶ್ ಜೈನ್ ಅವರದು. ಆಡಿಯೋ ಕಂಪನಿಯನ್ನು ಮುನ್ನಡೆಸುವ ಜೊತೆಗೆ ಅವರು ಕೆಲವು ಸದಭಿರುಚಿಯ ಕನ್ನಡ ಚಿತ್ರಗಳನ್ನು ನಿರ್ಮಿಸಿದರು. ಪ್ರೀತಿಸಲೇಬೇಕು, ನಿನಗೋಸ್ಕರ, ಮುಸ್ಸಂಜೆ ಮಾತು, ಚಿರು ಅವರ ನಿರ್ಮಾಣದ ಚಿತ್ರಗಳು. ಇಂದು ಬೆಂಗಳೂರಿನಲ್ಲಿ ಜೈನ ವಿಧಿವಿಧಾನಗಳ ಪ್ರಕಾರ ಅವರ ಅಂತ್ಯಕ್ರಿಯೆ ನೆರವೇರಲಿದೆ. (ಒನ್ಇಂಡಿಯಾ ಕನ್ನಡ)