twitter
    For Quick Alerts
    ALLOW NOTIFICATIONS  
    For Daily Alerts

    ರಾಂನಾರಾಯಣ್ ಹಾಡಿಗೆ ಹೆಜ್ಜೆ ಹಾಕಿದ ಚಿರು

    By Rajendra
    |

    ರಾಂನಾರಾಯಣ್ ರಚನೆಯ 'ಶಂಭೋ ಶಂಕರ ಅವನಾಟ ಥರಥರ ಆಗೊಂಥರ, ಈಗೊಂಥರ, ಮುಂದೊಂಥರ...' ಎಂಬ ಹಾಡಿಗೆ ಹರ್ಷ ನೃತ್ಯ ನಿರ್ದೇಶನದಲ್ಲಿ ನಾಯಕ ಚಿರಂಜೀವಿ ಸರ್ಜಾ ಹೆಜ್ಜೆ ಹಾಕಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಈ ಹಾಡಿನ ಚಿತ್ರೀಕರಣ ನಡೆದಿದೆ.

    ಎರಡು ಹಾಡುಗಳ ಚಿತ್ರೀಕರಣ ಪೂರ್ಣವಾದರೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಮಾರ್ಸ್ ಫಿಲಂಸ್ ಲಾಂಛನದಲ್ಲಿ ಸುರೇಶ್‌ಜೈನ್ ನಿರ್ಮಿಸುತ್ತಿರುವ 'ಚಿರು' ಚಿತ್ರದ ಹಾಡುಗಳ ಚಿತ್ರೀಕರಣ ಭರದಿಂದ ಸಾಗಿದೆ. ಗಿರಿಧರ್ ಸಂಗೀತ ಸಂಯೋಜಸುತ್ತಿರುವ ಈ ಚಿತ್ರವನ್ನು ಮಹೇಶ್‌ಬಾಬು ನಿರ್ದೇಶಿಸುತ್ತಿದ್ದಾರೆ.

    ಚಿತ್ರಕಥೆ ಹಾಗೂ ಸಂಭಾಷಣೆಯನ್ನೂ ನಿರ್ದೇಶಕರೇ ಬರೆದಿದ್ದಾರೆ. ಸ್ವಾಮೀಜಿ ಕಥೆ, ಸುಂದರನಾಥಸುವರ್ಣ ಛಾಯಾಗ್ರಹಣ, ಶ್ರೀ(ಕ್ರೇಜಿಮೈಂಡ್ಸ್) ಸಂಕಲನ, ರವಿವರ್ಮ ಸಾಹಸ, ಮುರುಳಿ, ಹರ್ಷ ನೃತ್ಯ ಸಂಯೋಜನೆಯಿರುವ 'ಚಿರು ಚಿತ್ರದ ತಾರಾಬಳಗದಲ್ಲಿ ಚಿರಂಜೀವಿ ಸರ್ಜಾ, ಕೃತಿ, ರಂಗಾಯಣರಘು, ಬುಲೆಟ್‌ಪ್ರಕಾಶ್, ಕಿರಣ್(ಹಾಗೆಸುಮ್ಮನೆ), ಪಿ.ಎನ್.ಸತ್ಯ, ನರಸಿಂಹಜೋಶಿ ಮುಂತಾದವರಿದ್ದಾರೆ.

    Thursday, June 3, 2010, 17:49
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X