Don't Miss!
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಧಾನಿ' ಎಕ್ಸ್ಪ್ರೆಸ್ನಂತೆ ಮುನ್ನುಗ್ಗಲಿ: ಗೃಹಸಚಿವ
ಕೇರಳದಂತಹ ಸಣ್ಣ ರಾಜ್ಯದಲ್ಲಿ ಪ್ರತಿವರ್ಷ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ನಮ್ಮಲ್ಲೂ ಆ ರೀತಿಯ ಚಿತ್ರಗಳನ್ನು ನಿರ್ಮಿಸಬೇಕಾಗಿದೆ ಎಂದು ಗೃಹಸಚಿವ ಆರ್ ಅಶೋಕ್ ಅಭಿಪ್ರಾಯಪಟ್ಟರು. ಅವರು 'ರಾಜಧಾನಿ' ಚಿತ್ರದ ಧ್ವನಿಸುರುಳಿ ಸಮಾರಂಭದಲ್ಲಿ ಮಾತನಾಡುತ್ತ್ತಿದ್ದರು. ರಾಜಧಾನಿ ಎಕ್ಸ್ಪ್ರೆಸ್ನಂತೆ ಚಿತ್ರ ಮುನ್ನುಗ್ಗಲಿ ಎಂದು ಅಶೋಕ್ ಚಿತ್ರತಂಡವನ್ನು ಹಾರೈಸಿದರು.
ಕನ್ನಡ ಚಿತ್ರಗಳು ಇನ್ನೂ ಹೆಚ್ಚಿನ ಗುಣಮಟ್ಟದೊಂದಿಗೆ ನಿರ್ಮಾಣವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂಬುದು ಆರ್ ಅಶೋಕ್ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿತ್ತು. ಚಿತ್ರದ ನಾಯಕ ನಟ ಯಶ್ ಮಾತನಾಡುತ್ತಾ, ಅರ್ಜುನ್ ಸಂಗೀತ ಸಂಯೋಜಿಸಿರುವ ಹಾಡುಗಳು ಕುಣಿದು ಕುಪ್ಪಳಿಸುವಂತಿವೆ. ಎಚ್ ಸಿ ವೇಣು ಅವರ ಛಾಯಾಗ್ರಹಣವೂ ಅದ್ಭುತವಾಗಿ ಮೂಡಿಬಂದಿದೆ ಎಂದರು.
ಈ ಚಿತ್ರದಲ್ಲಿ ಯಶ್ ಡ್ಯೂಪ್ ಕಲಾವಿದರನ್ನು ಬಳದೆ ಸ್ವತಃ ತಾವೇ ಸಾಹಸ ಸನ್ನಿವೇಶವನ್ನು ಮಾಡಿದ್ದಾರೆ. 24 ಅಂತಸ್ತಿನ ಮಹಡಿ ಮೇಲಿಂದ ಧುಮುಕುವ ಸನ್ನಿವೇಶವನ್ನು ಯಶ್ ಮಾಡಿರುವುದು ವಿಶೇಷ. ಈ ಬಗ್ಗೆ ಸಮಾರಂಭದಲ್ಲಿದ್ದ ಸುದೀಪ್ ಮಾತನಾಡುತ್ತಾ, ಈ ರೀತಿಯ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂದು ಯಶ್ಗೆ ಕಿವಿ ಮಾತು ಹೇಳಿದರು.
'ರಾಜಧಾನಿ' ಚಿತ್ರವನ್ನು ಕೆ ವಿ ರಾಜು ನಿರ್ದೇಶಿಸಿದ್ದು ಸೌಮ್ಯ ಸತ್ಯನ್ ನಿರ್ಮಿಸಿದ್ದಾರೆ. ಚಿತ್ರದ ನಾಯಕಿ ಶೀನಾ. ಈ ಚಿತ್ರವನ್ನು ಬೆಂಗಳೂರು, ಕೇರಳ, ಗೋವಾದಲ್ಲಿ ಚಿತ್ರೀಕರಿಸಲಾಗಿದೆ. 'ರಾಜಧಾನಿ' ಚಿತ್ರದ ಬಹುತೇಕ ಹಾಡುಗಳು ಕೇರಳ ಹಾಗೂ ಗೊವಾದ ಸುಂದರ ತಾಣಗಳಲ್ಲಿ ಚಿತ್ರೀಕರಿಸಿರುವುದು ವಿಶೇಷ.