Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಡು ಹಳೆಯದಾದರೇನು ಭಾವ ನವನವೀನ
ಹಳೆಯ ಜನಪ್ರಿಯ ಹಾಡುಗಳೆಂದರೆ ಯಾರಿಗೆ ತಾನೆ ಇಷ್ಟವಾಗಲ್ಲ. ಕನ್ನಡ ಹಾಗೂ ಹಿಂದಿಯ ಹಳೆಯ ಚಿತ್ರಗೀತೆಗಳನ್ನು ಕೇಳಿಸಲು ಪ್ರಿಸಂ ಫೌಂಡೇಷನ್ ಮತ್ತು ಶಿವಶಕ್ತಿ ಆರ್ಟ್ಸ್ ಮುಂದಾಗಿವೆ. ಮೇ 15ರಂದು ವಸಂತನಗರದ ಅಂಬೇಡ್ಕರ್ ಭವವನದಲ್ಲಿ ''ಮ್ಯಾಕ್ಸ್ ವರ್ತ್ ಮಧುರ ಸಂಗೀತ'' ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಚಿತ್ರನಟ ಶಿವರಾಂ ಮಾತನಾಡುತ್ತಾ, ಕಾರ್ಯಕ್ರಮದಲ್ಲಿ ಹಳೆಯ ಹಾಡುಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಹಿಂದಿನ ಮಧುರ ಹಾಡುಗಳನ್ನು ಇಂದಿನವರೂ ಒಪ್ಪಿಕೊಳ್ಳುತ್ತಾರೆ. ಯುವಕರಲ್ಲಿ ಹಳೆಯ ಹಾಡುಗಳ ಟ್ರೆಂಡ್ ಸೃಷ್ಟಿಯಾಗಿದೆ ಎಂದರು.
ಕಾರ್ಯಕ್ರಮದಿಂದ ಬಂದ ಹಣವನ್ನು ಸಾಮಾಜಿಕ ಕೈಂಕರ್ಯದಲ್ಲಿ ತೊಡಗಿರುವ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದು ಶಿವರಾಂ ತಿಳಿಸಿದರು.ಸಂಗೀತ ಸಂಸ್ಥೆ ಪ್ರಿಸಂ ಫೌಂಡೇಷನ್ ಅಧ್ಯಕ್ಷ ರಾಮ್ ಮಾತನಾಡುತ್ತಾ, ಕಾರ್ಯಕ್ರಮದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮನೋಜ್ ಕುಮಾರ್ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಚಿತ್ರನಟರಾದ ಅಂಬರೀಷ್, ಭಾರತಿ ವಿಷ್ಣುವರ್ಧನ್, ಜಯಂತಿ ಹಲವು ಖ್ಯಾತ ತಾರೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದಿ ಗಾಯಕರಾದ ಓಂ ಪ್ರಕಾಶ್ ಚತುರ್ವೇದಿ, ಡಾ.ಸಲೀಂ ಸೇರಿದಂತೆ ಕನ್ನಡ ಗಾಯಕಿ ಚಂದ್ರಿಕಾ ಗುರುರಾಜ್ ಮತ್ತಿತ್ತರು ಕಾರ್ಯಕ್ರಮದಲ್ಲಿ ಹಾಡಲಿದ್ದಾರೆ.