Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುಕಟ್ಟೆಗೆ 'ರಾವಣ' ಧ್ವನಿಸುರುಳಿ
ಪ್ರೀತಿಯ ಸುತ್ತ ಪರಿತಪಿಸುವ 'ರಾವಣ'ನಾಗಿ ಯೋಗೀಶ್ ಕಾಣಿಸಲಿದ್ದಾರೆ. ಗಾಂಧಿಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹುಟ್ಟುಹಬ್ಬ್ಬದ ದಿನ ಅಕ್ಟೋಬರ್ 2ರಂದು ರಾವಣ ಚಿತ್ರದ ಧ್ವನಿಸುರುಳಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಸಿಡಿ ಮತ್ತು ಧ್ವನಿಸುರುಳಿಗಳನ್ನು ಅಕ್ಷಯ ಆಡಿಯೋ ಹೊರತಂದಿದೆ.
ಉದಯ್.ಕೆ.ಮೆಹ್ತ ಹಾಗೂ ಮೋಹನ್.ಜಿ.ನಾಯಕ್ ನಿರ್ಮಿಸಿರುವ 'ರಾವಣ ಚಿತ್ರದ ಮೊದಲಪ್ರತಿ ಸಿದ್ಧವಾಗಿದೆ. ಶೀಘ್ರದಲ್ಲೇ ಬೆಳ್ಳಿಪರದೆಯ ಮೇಲೆ ರಾವಣ ರಾರಾಜಿಸಲಿದ್ದಾನೆ ಎಂದು ನಿರ್ದೇಶಕ ಯೋಗೀಶ್ ಹುಣಸೂರು ತಿಳಿಸಿದ್ದಾರೆ.ಈವರೆಗೂ ಯೋಗೀಶ್ ನಟಿಸಿರುವ ಚಿತ್ರಗಳ ಪಾತ್ರಕ್ಕಿಂತ ಈ ಚಿತ್ರದ ಪಾತ್ರ ವಿಭಿನ್ನವಾಗಿದ್ದು, ಅವರ ಅಭಿನಯ ಅಭಿಮಾನಿಗಳ ಮನಸೂರೆಗೊಳಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಜಿ ಅಭಿಮಾನ್ ರಾಯ್ಅವರ ಸಂಗೀತದಲ್ಲಿ ಚಿತ್ರದ ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತ ಪಡಿಸಿದ್ದಾರೆ.ನಿರ್ದೇಶಕರೇ ಈ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ. ಆರ್.ಗಿರಿ ಛಾಯಾಗ್ರಹಣ, ದಿನೇಶ್ ಮಂಗಳೂರ್ ಕಲೆ, ರವಿವರ್ಮ ಸಾಹಸ, ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ಸಂಚಿತಾ ಪಡುಕೋಣೆ, ಸಂತೋಷ್, ಶ್ರೀನಿವಾಸಮೂರ್ತಿ, ದ್ವಾರಕೀಶ್, ನೀನಾಸಂ ಅಶ್ವತ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)