Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮಾಜಕ್ಕೆ ಕನ್ನಡಿ ಹಿಡಿಯುವ ಮುಖಪುಟ
ಏಡ್ಸ್ ಪೀಡತ ಮಕ್ಕಳ ಪುಟ್ಟ ಕೈಗಳಲ್ಲಿ 'ಮುಖಪುಟ' ಚಿತ್ರದ ಧ್ವನಿಸುರುಳಿಗಳು ಇದ್ದವು. ವೇದಿಕೆ ಮೇಲೆ ಮಕ್ಕಳೊಂದಿಗೆ ಮಾತಾನಾಡುತ್ತಿದ್ದ ರೂಪಾ ಅಯ್ಯರ್ ಭಾವುಕರಾಗಿದ್ದರು. ಅವರ ಮಾತುಗಳಲ್ಲಿ ಸಮಾಜದ ಮುಖಪುಟ ಅನಾವರಣಗೊಂಡಿತ್ತು. ಈ ಪುಟ್ಟ ಮಕ್ಕಳಾದರೂ ಏನು ಪಾಪ ಮಾಡಿದ್ದರು? ಎಂಬ ಅವರ ಪ್ರಶ್ನೆ ಸಮಾಜಕ್ಕೆ ಚುಚ್ಚುತ್ತಿತ್ತು. ಯುವಕರು ಶಿಕ್ಷಣದೊಂದಿಗೆ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಅವರು ಸಲಹೆ ನೀಡಿದರು.
ಈ ಹೃದಯಸ್ಪರ್ಶಿ ಕಾರ್ಯಕ್ರಮದಲ್ಲಿ ಎಚ್ ಐವಿ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ನಟರಾದ ರಾಘವೇಂದ್ರ ರಾಜ್ ಕುಮಾರ್, ಜಗ್ಗೇಶ್ ಕ್ರಮವಾಗಿ ರು.1 ಲಕ್ಷ ಮತ್ತು ರು.50 ಸಾವಿರ ಸಹಾಯಧನ ನೀಡಿದರು. ವಜ್ರೇಶ್ವರಿ ಕುಮಾರ್ ರು.50 ಸಾವಿರ ಮತ್ತು ಛಾಯಾಗ್ರಾಹಕ ಐತಾಳ್ ರು.25 ಸಾವಿರ ಸಹ ನೆರವು ನೀಡಿದರು. ಸಮಾಜದ ಬಗ್ಗೆ ರೂಪ ಅಯ್ಯರ್ ಅವರ ಕಾಳಜಿ ಮುಕ್ತ ಪ್ರಶಂಸೆಗೆ ಪಾತ್ರವಾಯಿತು.
ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡುತ್ತಾ, ಇತರರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವವರು ದಯವಿಟ್ಟು ಗರ್ಭ ನಿರೋಧಕಗಳನ್ನು ಉಪಯೋಗಿಸಿ. ನಮ್ಮ ಸಮಾಜಕ್ಕೆ ಏಡ್ಸ್ ಪೀಡಿತ ಮಕ್ಕಳು ಬೇಡ ಎಂದು ಅವರು ನೇರವಾಗಿ ನುಡಿದರು. ಇದೇ ಸಂದರ್ಭದಲ್ಲಿ ಹಂಸಲೇಖ ಅವರಿಗೆ 'ಧೃವ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
(ದಟ್ಸ್ ಕನ್ನಡ ಚಿತ್ರವಾರ್ತೆ)