Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧುರ ಯಾನ ಮಂಜುಳ ಗಾನ
ಜನಪ್ರಿಯ ಹಿನ್ನೆಲೆ ಗಾಯಕಿ ಮಂಜುಳ ಗುರುರಾಜ್ ಅವರು ತಮ್ಮ ವೃತ್ತಿ ಜೀವನದಲ್ಲಿ 25 ವಸಂತಗಳನ್ನು ಪೂರೈಸಿದ್ದಾರೆ. ಈ ಹೆಗ್ಗಳಿಕೆಗಾಗಿ ರಂಜನಿ ಕಲಾಕೇಂದ್ರವು ಅ.30ರಂದು 'ಮಧುರ ಯಾನ ಮಂಜುಳ ಗಾನ' ಶೀರ್ಷಿಕೆಯಡಿ ಸುಮಧುರ ಸಂಗೀತ ಕಾರ್ಯಕ್ರಮವನ್ನು ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ಏರ್ಪಡಿಸಿದೆ.
ಕಾರ್ಯಕ್ರಮದಲ್ಲಿ ಮಂಜುಳ ಗುರುರಾಜ್ ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ಭವ್ಯ ಸಂಗೀತ ರಾತ್ರಿ ಕಾರ್ಯಕ್ರಮದಲ್ಲಿ ಮಂಜುಳ ಗುರುರಾಜ್ ಹಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಹ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 30 ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 99806 33114 ಸಂಪರ್ಕಿಸಬಹುದು.
ಕಾರ್ಯಕ್ರಮಕ್ಕೆ ಎಸ್.ಜಾನಕಿ, ಇಳಯರಾಜ, ಡಿ.ಜೇಸುದಾಸ್, ಎಂ.ಡಿ.ಪಲ್ಲವಿ, ಅರ್ಚನಾ ಉಡುಪ, ರಾಜೇಶ್ ಕೃಷ್ಣ, ನಂದಿತಾ, ಸಂಗೀತಾ ಕಟ್ಟಿ, ಹಂಸಲೇಖ, ವಿಜಯ್ ಆನಂದ್, ನರಸಿಂಹ ನಾಯಕ್, ಶಿವಮೊಗ್ಗ ಸುಬ್ಬಣ್ಣ, ರಮೇಶ್ಚಂದ್ರ, ಮನೋಹರ್, ವಿಷ್ಣುವರ್ಧನ್, ಅಂಬರೀಷ್, ಪಾರ್ವತಮ್ಮ ರಾಜ್ ಕುಮಾರ್ ಮತ್ತು ಕುಟುಂಬದವರು, ಜಯಮಾಲಾ, ದ್ವಾರಕೀಶ್, ಅಪರ್ಣ, ಶ್ರುತಿ, ಸುರೇಖ ಮತ್ತು ಅಜಯ್ ವಾರಿಯರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)