Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸಸಿಂಹ ವಿಷ್ಣುವರ್ಧನ್ ಬರ್ತ್ಡೇ ಸ್ಪೆಷಲ್
ಇದು ಸಾಹಸಸಿಂಹ ಡಾ.ವಿಷ್ಣುವರ್ಧನ್ ಬರ್ತ್ಡೇ ಸ್ಪೆಷಲ್ ಕಾರ್ಯಕ್ರಮ. ಖ್ಯಾತ ಹಿನ್ನೆಲೆ ಗಾಯಕ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಗುರುಕಿರಣ್ ಅವರು 'ಸಂಗೀತ ಸುಧೆ' ಹರಿಸಲಿದ್ದಾರೆ. ಸ್ಥಳ ಕೋರಮಂಗಲ ಒಳಾಂಗಣ ಕ್ರೀಡಾಂಗಣ. ಸಮಯ ಶನಿವಾರ (ಸೆ.17) ಸಂಜೆ 6 ಗಂಟೆಗೆ ಸರಿಯಾಗಿ. ಪ್ರವೇಶ ಉಚಿತ.
ಈ ವಿಶೇಷ ಕಾರ್ಯಕ್ರಮವನ್ನು ವಿಭಾ ಚಾರಿಟೇಬಲ್ ಟ್ರಸ್ಟ್ ಮತ್ತು ವಾರ್ತಾ ಇಲಾಖೆ ಅವರ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ. ವಿಷ್ಣುವರ್ಧನ್ ಅವರ 61ನೇ ಹುಟ್ಟುಹಬ್ಬದ ಪ್ರಯುಕ್ತ ಸಂಗೀತ ಸುಧೆ ಸವಿಯಬಹುದು.
ಸಾಹಸಸಿಂಹ ವಿಷ್ಣುವರ್ಧನ್ ಅವರ ಅತಿಹೆಚ್ಚು ಚಿತ್ರಗಳಲ್ಲಿ ಹಾಡಿದ ಖ್ಯಾತಿ ಎಸ್ಪಿಬಿಗೆ ಸಲ್ಲುತ್ತದೆ. ಬನ್ನಿ ನಿಮ್ಮ ನೆಚ್ಚಿನ ನಟನಿಗೆ ಅಭಿಮಾನದ ಹೂಮಳೆಗರೆಯಿರಿ. ಹಾಗೆಯೇ ಸೆ.18ರಂದು ಜಯನಗರ ಟಿ ಬ್ಲಾಕ್ನ ವಿಷ್ಣು ನಿವಾಸದ ಮುಂದಿನ ಪಾರ್ಕ್ಗೆ 'ಸಾಹಸಸಿಂಹ ಡಾ.ವಿಷ್ಣುವರ್ಧನ್ ವಿಶ್ರಾಂತಿ ವನ' ಎಂದು ನಾಮಕರಣ ಮಾಡಲಾಗುತ್ತದೆ.
ಇದಾದ ಬಳಿಕ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣು ಅವರ ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಭಿಮಾನಿಗಳಿಂದ ಸ್ವಯಂಪ್ರೇರಿತ ರಕ್ತದಾನ ನಡೆಯಲಿದೆ. ಅಭಿಮಾನಿಗಳೊಂದಿಗೆ ವಿಭಾ ಟ್ರಸ್ಟ್ ಕೈಜೋಡಿಸಲಿದೆ. (ದಟ್ಸ್ಕನ್ನಡ ಸಿನಿವಾರ್ತೆ)