Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Priyanka Gandhi: ಚುನಾವಣೆಯಲ್ಲಿ ಸದ್ದು ಮಾಡುತ್ತಿದೆ ಮಂಗಳಸೂತ್ರ: ಮೋದಿಗೆ ಪ್ರಿಯಾಂಕಾ ತಿರುಗೇಟು
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಪಟೂರಿನಲ್ಲಿ 'ಒಲವೇ ವಿಸ್ಮಯ' ಧ್ವನಿಸುರುಳಿ
ತೆಂಗಿನ ನಾಡು ತಿಪಟೂರಿನಲ್ಲಿ 'ಒಲವೇ ವಿಸ್ಮಯ' ಸಿಡಿ ಮತ್ತು ಧ್ವನಿಸುರುಳಿಗಳು ಮಾರುಕಟ್ಟೆಗೆ ಬಿಡುಗಡೆಯಾಗಿವೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಧ್ವನಿಸುರುಳಿ ಮತ್ತು ಸಿಡಿಗಳನ್ನು ಬಿಡುಗಡೆ ಮಾಡಿದರು. ಚಿತ್ರದ ನಿರ್ಮಾಪಕ ಲಿಂಗರಾಜು ಅವರ ಹುಟ್ಟೂರು ತಿಪಟೂರು. ಹಾಗಾಗಿ ಧ್ವನಿಸುರುಳಿ ಮತ್ತು ಸಿಡಿಗಳನ್ನು ಅಲ್ಲೇ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.
ನಿರ್ದೇಶಕ ನಾಗೇಶ್ ಕುಮಾರ್ ಹೇಳಿದ ಕತೆ ಲಿಂಗರಾಜು ಅವರಿಗೆ ಹಿಡಿಸಿತಂತೆ. ಚಿತ್ರಕತೆ ಪ್ರೆಶ್ ಆಗಿದ್ದ ಕಾರಣ 'ಒಲವೇ ವಿಸ್ಮಯ' ಮಾಡಿದ್ದಾಗಿ ಲಿಂಗರಾಜು ಹೇಳಿದ್ದಾರೆ. ಧ್ವನಿಸುರುಳಿ ಬಿಡುಗಡೆಯಾದ ದಿನವೇ ತಿಪಟೂರಿನಲ್ಲಿ 5000 ಸಿಡಿಗಳು ಮತ್ತು 1000 ಧ್ವನಿಸುರುಳಿಗಳು ಮಾರಟವಾಗಿದ್ದಾಗಿ ನಿರ್ದೇಶಕ ನಾಗೇಶ್ ಕುಮಾರ್ ತಿಳಿಸಿದ್ದಾರೆ.
ವಿಭಿನ್ನವಾಗಿರುವ 'ಒಲವೇ ವಿಸ್ಮಯ' ಬಾಕ್ಸಾಫೀಸ್ ನಲ್ಲಿ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ನಿರ್ದೇಶಕರು ವಕ್ತಪಡಿಸಿದ್ದಾರೆ. ತಮ್ಮ ಹಿಂದಿನ ಚಿತ್ರಗಳಿಗಿಂತ 'ಒಲವೇ ವಿಸ್ಮಯ' ಚಿತ್ರದ ಸಂಗೀತ ವಿಭಿನ್ನವಾಗಿದೆ ಎಂದು ಸಂಗೀತ ನಿರ್ದೇಶಕ ವೀರ ಸಮರ್ಥ ಹೇಳಿದ್ದಾರೆ.
ನಾಯಕ ನಟನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿರುವ ಮೊದಲ ಚಿತ್ರ ಇದಾಗಿದೆ. ಚಿತ್ರದ ನಾಯಕಿ ಪ್ರತಿಭಾ ರಾಣಿ ಸಹ ಒಲವೇ ವಿಸ್ಮಯ ಬಗ್ಗೆ ಮೆಚ್ಚ್ಚುಗೆ ವ್ಯಕ್ತಪಡಿಸಿದರು. ಚಿತ್ರದ ಪಾತ್ರದಲ್ಲಿ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡಿದ್ದಾಗಿ ಪ್ರತಿಭಾ ರಾಣಿ ತಿಳಿಸಿದರು. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಮುಗಿದಿದ್ದು ಉಳಿದ ಹಾಡುಗಳ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)