ಹಿನ್ನೆಲೆ ಸಂಗೀತದಲ್ಲಿ ಮಿಂದ ಮೊದಲಾಸಲ
ಕರ್ನಾಟಕ ಟಾಕೀಸ್ ರವರ ಚೊಚ್ಚಲ ಕಾಣಿಕೆಯಾದ 'ಮೊದಲಾಸಲ' ಚಿತ್ರಕ್ಕೆ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರ ಉಸ್ತುವಾರಿಯಲ್ಲಿ ಹಿನ್ನಲೆ ಸಂಗೀತ ನೀಡಲಾಗುತ್ತಿದೆ.ಕಾವೇರಿ ತವರಾದ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳು ಹಾಗೂ ಕೇರಳದ ಪ್ರಸಿದ್ಧ ಜಲಪಾತಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ.
ನವಗ್ರಹ, ಜೊತೆಜೊತೆಯಲಿ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ್ ಗದಗ ಪ್ರಥಮ ಬಾರಿಗೆ ಸಾಫ್ಟ್ ವೇರ್ ಮಿತ್ರ ಯೋಗೀಶ್ನಾರಾಯಣ್ ಜೊತೆ ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ವೆಂಕಟೇಶ್ನಾಯಕ್, ಜಗದೀಶ್ ಕಾಳಗಿ, ಮಯೂರ್ ಮತ್ತು ಮಹೇಶ್ಪಟೇಲ್ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಪುರುಷೋತ್ತಮ್ ಈ ಚಿತ್ರದ ನಿರ್ದೇಶಕರು. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ರವಿವರ್ಮ ಸಾಹಸ, ವಿ.ನಾಗೇಂದ್ರ ಪ್ರಸಾದ್ ಗೀತರಚನೆ, ದಿನೇಶ್ ಮಂಗಳೂರು ಕಲೆ ಹಾಗೂ ಶಶಿಧರ್ ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದತಾರಾಬಳಗದಲ್ಲಿ ಯಶ್, ಭಾಮ, ರಂಗಾಯಣ ರಘು, ಅವಿನಾಶ್, ಶರಣ್, ತಾರಾ, ಯೋಗೀಶ್ನಾರಾಯಣ್, ರಾಕೇಶ್, ತಿಮ್ಮೇಗೌಡ ಮುಂತಾದವರಿದ್ದಾರೆ.


Click it and Unblock the Notifications











