Don't Miss!
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಸೆಂಬರ್ 29ರಂದು ಕನ್ನಡವೇ ಸತ್ಯ, ಅಶ್ವತ್ಥ್ ನಿತ್ಯ
ಈ ಸುಗಮ ಸಂಗೀತ ಯಾತ್ರೆಯನ್ನು ಆದರ್ಶ ಸುಗಮ ಸಂಗೀತ ಟ್ರಸ್ಟ್ ನಡೆಸಿಕೊಡಲಿದೆ. ರಾಜ್ಯದ 30 ಜಿಲ್ಲೆಗಳ ಸುಮಾರು 3 ಸಾವಿರ ಗಾಯಕರು ಈ ಕಾರ್ಯಕ್ರಮದಲ್ಲಿ ಸಮೂಹ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ. ಇದೊಂದು ವಿಭಿನ್ನ ಕಾರ್ಯಕ್ರಮವಾಗಿದೆ ಎಂದು ಆದರ್ಶ ಸುಗಮ ಸಂಗೀತ ಟ್ರಸ್ಟ್ ಅಧ್ಯಕ್ಷ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಗೆ ಸಂಚರಿಸಿ 3 ಸಾವಿರ ಗಾಯಕ, ಗಾಯಕಿಯರಿಗೆ ತರಬೇತಿ ನೀಡಲಾಗಿದೆ. ಕೇವಲ ರಾಜ್ಯದವರಷ್ಟೇ ಅಲ್ಲದೆ ವಿದೇಶಗಳಿಂದಲೂ ಗಾಯಕ, ಗಾಯಕಿಯರು ಈ ಕಾರ್ಯಕ್ರಮದಲ್ಲಿ ಗಾನಸುಧೆಯನ್ನು ಪ್ರಸ್ತುತಪಡಿಸಲಿದ್ದಾರೆ.
ಮೂರು ಸಾವಿರ ಕಲಾವಿದರನ್ನು ಒಂದೇ ವೇದಿಕೆಗೆ ಆಹ್ವಾನಿಸಿ ಹಾಡಿಸಬೇಕು ಎಂಬುದು ಸಿ ಅಶ್ವತ್ಥ್ ಅವರ ಕನಸಾಗಿತ್ತು. ಅವರ ಹಠಾತ್ ನಿಧನದಿಂದ ಅವರ ಕನಸು ಈಡೇರಿರಲಿಲ್ಲ. ಈಗ ಅವರ ಪ್ರೀತಿಯ ಶಿಷ್ಯರೂ ಆಗಿರುವ ಕಿಕ್ಕೇರಿ ಕೃಷ್ಣಮೂರ್ತಿಗಳು ಆ ಕೆಲಸಕ್ಕೆ ಕೈಹಾಕುತ್ತಿದ್ದಾರೆ.
ಕನ್ನಡ ಚಿತ್ರಗಳು : ಆರಿಸಿನೋಡು ಬೀಳಿಸಿನೋಡು
ಡಿಸೆಂಬರ್ 29ರಂದು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿ, ಡಾ.ಶಾಂತವೀರಸ್ವಾಮೀಜಿ, ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ, ಖ್ಯಾತ ಕವಿಗಳಾದ ಹೆಚ್ ಎಸ್ ವೆಂಕಟೇಶಮೂರ್ತಿ, ಲಕ್ಷ್ಮಿನಾರಾಯಣಭಟ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪಾಸ್ಗಳ ಮೂಲಕ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಸುಮಾರು 25 ಸಾವಿರ ಪ್ರೇಕ್ಷಕರು ಈ ವಿಭಿನ್ನ ಕಾರ್ಯಕ್ರಮವನ್ನು ಸವಿಯಬಹುದು. ಹಲವರು ನೆರವಿನಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಸುಮಾರು ರು.80 ಲಕ್ಷ ವೆಚ್ಚ ಮಾಡಲಾಗಿದೆ.
ಉಚಿತ ಪಾಸ್ಗಳಿಗಾಗಿ ದೂರವಾಣಿ ಸಂಖ್ಯೆಗಳು ಹೀಗಿವೆ: 94480 00245, 99003 66711, 94482 38463, 98455 40487, 94480 46816, 94482 38461. ಪತ್ರಿಕಾಗೋಷ್ಠಿಯಲ್ಲಿ ಲಹರಿ ವೇಲು, ಗಾಯಕಿ ವೃಂದಾ ಎಸ್ ರಾವ್, ಸಂಗೀತಗಾರರಾದ ಎಂ ಎಸ್ ಪ್ರಸಾದ್, ಸುದರ್ಶನ್, ರಂಗ ಸಂಘಟಕ ಶ್ರೀನಿವಾಸ್ ಜಿ ಕಪ್ಪಣ್ಣ ಉಪಸ್ಥಿತರಿದ್ದರು. [ಸಿ ಅಶ್ವತ್ಥ್]