Just In
- 16 min ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 1 hr ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
- 3 hrs ago
ಪುನೀತ್ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ
Don't Miss!
- News
ಹಿಂದೀವಾಲಾಗಳಿಗೆ ಯಡಿಯೂರಪ್ಪ ಸರಕಾರದ ಶರಣಾಗತಿಯ ಪರಮಾವಧಿ
- Finance
ಜನವರಿ ತಿಂಗಳ ಮೊದಲ 15 ದಿನಗಳಲ್ಲಿ FPI 14,866 ಕೋಟಿ ರು. ಹೂಡಿಕೆ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Sports
ಪೂಜಾರ ವಿರುದ್ಧ ಆಸ್ಟ್ರೇಲಿಯಾ ತನ್ನ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಿದೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ವಯಂಕೃಷಿ ಧ್ವನಿಸುರುಳಿಗೆ ಸಖತ್ ಡಿಮ್ಯಾಂಡ್ ಅಂತೆ
ಸಮಾಜದಲ್ಲಿ ಮನುಷ್ಯ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬ ಸಂದೇಶವನ್ನು ಹೊತ್ತು ಬರುತ್ತಿರುವ ಚಿತ್ರ 'ಸ್ವಯಂಕೃಷಿ'. ಈಗಾಗಲೆ ಈ ಚಿತ್ರ ಶೇ.70ರಷ್ಟು ಚಿತ್ರೀಕರಣ ಪೂರೈಸಿದೆ. ಸದ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ.
ಈ ಚಿತ್ರಕ್ಕೆ ನಿರ್ದೇಶಕ, ನಿರ್ಮಾಪಕ ಹಾಗೂ ನಾಯಕ ನಟ ವೀರೇಂದ್ರ ಬಾಬು. ಅವರು ಮೂಲತಃ ಶಿಡ್ಲಘಟ್ಟದವರು. ಸ್ವಯಂಕೃಷಿ ಚಿತ್ರೀಕರಣಕ್ಕೆ ಸ್ಥಳೀಯರು ಮುಗಿಬಿದ್ದಿದ್ದರು. ಈ ಚಿತ್ರದ ಬಹುತೇಕ ಚಿತ್ರೀಕರಣ ಮೈಸೂರು ಮತ್ತು ಮಂಡ್ಯದಲ್ಲಿ ನಡೆದಿದೆ. ಹೆಚ್ಚಾಗಿ ಗ್ರಾಮೀಣ ಪ್ರದೇಶದಲ್ಲಿ ಚಿತ್ರೀಕರಿಸಿರುವುದು ವಿಶೇಷ.
ಚಿತ್ರದ ಹಾಡುಗಳನ್ನು ಕೆಂಪುಕೋಟೆ, ತಾಜ್ ಮಹಲ್ ಮತ್ತು ಗೋವಾದಲ್ಲಿ ಚಿತ್ರೀಕರಿಸಲಾಗುತ್ತದೆ ಎಂದು ವೀರೇಂದ್ರ ಬಾಬು ತಿಳಿಸಿದ್ದಾರೆ.ನಂಬಿದರೆ ನಂಬಿ ಬಿಟ್ಟರೆ ಬಿಡಿ 'ಸ್ವಯಂಕೃಷಿ' ಚಿತ್ರದ ಆಡಿಯೋ ಸಿಡಿಗೆ ಸಖತ್ ಡಿಮ್ಯಾಂಡ್ ಅಂತೆ!. 2.5 ಲಕ್ಷ ಆಡಿಯೋ ಸಿಡಿಗಳನ್ನು ಬುಕ್ ಮಾಡಲಾಗಿದೆ ಎಂದು ವಿವರ ನೀಡಿದ್ದಾರೆ ವೀರೇಂದ್ರ ಬಾಬು. ಇದು 'ಸ್ವಯಂ' ಬೇಡಿಕೆಯೋ ಅಥವ 'ಕೃಷಿ'ಯೋ ಗೊತ್ತಿಲ್ಲ.
ಈ ಚಿತ್ರದಲ್ಲಿ ಉಮಾಶ್ರೀ ನಾಯಕನ ತಾಯಿಯಾಗಿ ಕಾಣಿಸುತ್ತಿದ್ದಾರೆ. ಸುಮಾರು ರು.3. ಕೋಟಿ ವೆಚ್ಚದಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆಯಂತೆ. ಪ್ರಿಯಾಂಕಾ ದೇಸಾಯಿ ಮತ್ತು ತಮನ್ನಾ ತನ್ವೀರ್ ಚಿತ್ರದ ಇಬ್ಬರು ನಾಯಕಿಯರು. ಚರಣ್ ರಾಜ್ ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.