Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪುಗೆ ಪ್ರೇಮ್ ಕಹಾನಿ ಸಿಡಿ ಕೊಟ್ಟ ಪೂಜಾ ಗಾಂಧಿ
'ತಾಜ್ ಮಹಲ್' ಚಿತ್ರದ ಯಶಸ್ಸಿನಿಂದ ಉತ್ತೇಜಿತರಾಗಿರುವ ನಿರ್ದೇಶಕ ಆರ್ ಚಂದ್ರು ಅವರ ಎರಡನೇ ಚಿತ್ರ ' ಪ್ರೇಮ್ ಕಹಾನಿ' ಚಿತ್ರದ ಧ್ವನಿಸುರಳಿ ಬಿಡುಗಡೆ ಕಾರ್ಯಕ್ರಮ ಲೀ ಮೆರಿಡಿಯನ್ ಹೋಟೆಲ್ ನಲ್ಲಿ ನಡೆಯಿತು. ಆ ದಿನಗಳು ಚಿತ್ರದ ನಂತರ ಸಂಗೀತ ಬ್ರಹ್ಮ ಇಳೆಯರಾಜಾ ಅವರು ಪ್ರೇಮ್ ಕಹಾನಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ ಧ್ವನಿಸುರಳಿ ಬಿಡುಗಡೆಗೊಳಿಸಿದರು.
ತಾಜ್ ಮಹಲ್ ಚಿತ್ರದಂತೆ ನನ್ನ ನಿರ್ದೇಶನದ ಪ್ರೇಮ ಕಹಾನಿ ಚಿತ್ರ ಕೂಡ ಯಶಸ್ಸುಗೊಳ್ಳುತ್ತದೆ ಎನ್ನುವ ನಂಬಿಕೆ ಇದೆ ಎಂದು ಚಂದ್ರು ಈ ಸಂದರ್ಭದಲ್ಲಿ ಹೇಳಿದರು. 28 ವರ್ಷಗಳಿಂದ ಚಿತ್ರವೊಂದನ್ನು ನಿರ್ಮಿಸಬೇಕೆಂದು ಕನಸು ಕಂಡಿದ್ದೆ, ಅದೂ ನನ್ನ ನಿರ್ಮಾಣದ ಚಿತ್ರಕ್ಕೆ ಇಳೆಯರಾಜಾ ಅವರ ಸಂಗೀತದೊಂದಿಗೆ ಸಂಯೋಜಿಸಬೇಕು ಎಂಬ ಕನಸಿತ್ತು, ನಿರ್ದೇಶಕ ಚಂದ್ರು ಮೂಲಕ ಅದು ಈಡೇರಿದೆ ಎಂದು ನಿರ್ಮಾಪಕ ವಿಶ್ವನಾಥ್ ಹೇಳಿದ್ದಾರೆ. ಇಳೆಯರಾಜಾ ಸಂಗೀತ ನಿರ್ದೇಶಿಸಿರುವ ಚಿತ್ರವೊಂದಕ್ಕೆ ನಾನು ನಾಯಕನಾಗಿರುವುದು ನನ್ನ ಅದೃಷ್ಟ ಎಂದು ನಾಯಕ ಅಜಯ್ ರಾವ್ ತನ್ನ ಮನದಾಳದ ಮಾತನ್ನು ಬಿಚ್ಚಿಟ್ಟರು.
ಚಿತ್ರದಲ್ಲಿ ಒಟ್ಟು 9 ಹಾಡುಗಳಿವೆ. ಕಲ್ಯಾಣ್, ನಾಗೇಂದ್ರ ಪ್ರಸಾದ್ ಮತ್ತು ಕವಿರಾಜ್ ಅವರ ಸಾಹಿತ್ಯವಿದೆ. ಚಿತ್ರದ ಎರಡು ಹಾಡುಗಳನ್ನು ಇಳಯರಾಜ ಅವರೇ ಸ್ವತಃ ಹಾಡಿದ್ದಾರೆ. ಶ್ರೇಯಾ ಘೋಷಾಲ್, ಮೇಘಾ ಪಾಂಡೆ, ಟಿಪ್ಪು, ರಾಹುಲ್ ಪಾರ್ಥಸಾರಥಿ ಮತ್ತು ಸಾಧನಾ ಸರ್ಗಂ ಕೂಡ ಚಿತ್ರದಲ್ಲಿ ಹಾಡಿದ್ದಾರೆ. ಚಿತ್ರದ ಧ್ವನಿಸುರಳಿ ಅಶ್ವಿನಿ ಆಡಿಯೋ ಮೂಲಕ ಹೊರಬಂದಿದೆ.
(ದಟ್ಸ್ ಕನ್ನಡ ಚಿತ್ರ ವಾರ್ತೆ)