Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಲಿ ಡೇಸ್ ಕಾರ್ಯಕ್ರಮದಲ್ಲಿ ಶ್ರೀಶಾಂತ್
ಶ್ರೀಶಾಂತ್ ಹಾಗೂ ಬಣ್ಣದ ಲೋಕದ ಸಂಬಂಧ ಇದೇ ಮೊದಲಲ್ಲ.ಅವರು ಈಗಾಗಲೇ 'ಕಲರ್' ಚಾನೆಲ್ ನ 'ಏಕ ಕಿಲಾಡಿ ಏಕ್ ಹಸೀನಾ' ಎಂಬ ಕಾರ್ಯಕ್ರಮದಲ್ಲಿ ತಾನೊಬ್ಬ ಉತ್ತಮ ನೃತ್ಯ ಪಟು ಎಂಬುದನ್ನು ನಿರೂಪಿಸಿಕೊಂಡಿದ್ದಾರೆ. ಜಾಲಿ ಡೇಸ್ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಅರ್ಧ ಗಂಟೆಗೂ ಹೆಚ್ಚಿನ ಕಾಲ ಕಳೆದದ್ದ್ದು ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದಿತ್ತು.
'ನೀವೆಲ್ಲಾ ಚೆನ್ನಾಗಿದ್ದೀರಾ?' ಎಂದು ಕನ್ನಡದಲ್ಲಿ ಕೇಳುವ ಮೂಲಕ ತುಂಬಿದ ಸಭೆಯನ್ನು ಅಚ್ಚರಿಯ ಕಡಲಲ್ಲಿ ತೇಲಿಸಿ ಮುಳುಗಿಸಿದರು. ಜಾಲಿ ಡೇಸ್ ಚಿತ್ರದ ಹಾಡುಗಳನ್ನು ತಾನು ಈಗಾಗಲೇ ಕೇಳಿದ್ದೇನೆ, ಇಂಪಾಗಿವೆ ಎಂದು ಪ್ರಮಾಣ ಪತ್ರ ನೀಡಿದರು. ಪುನೀತ್ ರಾಜ್ ಕುಮಾರ್ ಅವರ ನಟನೆಯನ್ನು ಮೆಚ್ಚಿಕೊಂಡರು. ನಂತರ ಜಾಲಿ ಡೇಸ್ ನ ಹೊಸಬರನ್ನು ಹಾರೈಸಿದರು.
ತೆಲುಗಿನ 'ಹ್ಯಾಪಿ ಡೇಸ್' ಚಿತ್ರದ ರೀಮೇಕ್ 'ಜಾಲಿ ಡೇಸ್'. ಈ ಚಿತ್ರವನ್ನು ಫ್ರೆಂಡ್ಸ್, ಚೆಲ್ಲಾಟ, ಕೃಷ್ಣ, ದೇವರು ವರವನು ಕೊಟ್ರೆ ಚಿತ್ರಗಳ ನಿರ್ದೇಶಕ ಎಂ.ಡಿ.ಶ್ರೀಧರ್ ನಿರ್ದೇಶಿಸುತ್ತಿದ್ದಾರೆ. ತೆಲುಗಿನ ಮಾದಿರೆಡ್ಡಿ ಪರಮ್ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿರುವ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯ ವಿದೆ. ವರ್ಣರಂಜಿತ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಆನಂದ್ ಆಡಿಯೋದ ಮೋಹನ್, ಕೆ ಎಫ್ ಸಿಸಿ ಮಾಜಿ ಅಧ್ಯಕ್ಷ ಗಂಗರಾಜು, ಛಾಯಾಗ್ರಾಹಕ ಕೃಷ್ಣಕುಮಾರ್ ಹಾಗೂ 'ಜಾಲಿ ಡೇಸ್' ಚಿತ್ರತಂಡವರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)