ಉಳುವ ಯೋಗಿಯ ದಿರಿಸಿನಲ್ಲಿ ಡಾ.ರಾಜ್

By Staff

ಚಿತ್ರ: ಕಾಮನಬಿಲ್ಲು(1983) -
ಸಾಹಿತ್ಯ: ಕುವೆಂಪು
ಸಂಗೀತ :ಉಪೇಂದ್ರಕುಮಾರ್
ಧ್ವನಿ ; ಸಿ. ಅಶ್ವಥ್

ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ರೈತ ಗೀತೆಗೆ ಬಿಜೆಪಿ ಸರ್ಕಾರ ನಾಡಗೀತೆಯ ಮಾನ್ಯತೆ ನೀಡಲು ನಿರ್ಧರಿಸಿದೆ. ಕುವೆಂಪು ಸಾಹಿತ್ಯದ ಈ ಹಾಡನ್ನು 'ಕಾಮನಬಿಲ್ಲು' ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿತ್ತು. ಮೇರು ನಟ ಡಾ. ರಾಜ್ ಕುಮಾರ್, ಅನಂತ್ ನಾಗ್ ನಟಿಸಿದ ಈ ಹಾಡಿಗೆ ಸಿ. ಅಶ್ವಥ್ ದನಿಗೂಡಿಸಿದ್ದರು. ಉಪೇಂದ್ರ ಕುಮಾರ್ ಅವರ ಸಂಗೀತ ಸಂಯೋಜನೆಯಲ್ಲಿ ಬಂದ ಈ ಹಾಡು ಅಜರಾಮರವಾಗಿಲಿ. ಈ ಹಾಡಿನ ಪೂರ್ಣ ಚರಣ ಇಲ್ಲಿದೆ.

ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ
ಫಲವನು ಬಯಸದೆ ಸೇವೆಯೆ ಪೂಜೆಯು ಕರ್ಮವೆ ಇಹಪರ ಸಾಧನವು
ಕಷ್ಟದೊಳನ್ನವ ದುಡಿವನೆ ತ್ಯಾಗಿ ಸೃಷ್ಟಿನಿಯಮದೊಳಗವನೇ ಭೋಗೀ
ಉಳುವಾ ಯೋಗಿಯ ನೋಡಲ್ಲಿ ||

ಲೋಕದೊಳೇನೇ ನಡೆಯುತಲಿರಲಿ ತನ್ನೀ ಕಾರ್ಯವ ಬಿಡನೆಂದೂ
ರಾಜ್ಯಗಳುಳಿಸಲಿ ರಾಜ್ಯಗಳಳಿಯಲಿ ಹಾರಲಿ ಗದ್ದುಗೆ ಮುಕುಟಗಳು
ಮುತ್ತಿಗೆ ಹಾಕಲಿ ಸೈನಿಕರೆಲ್ಲ ಬಿತ್ತುಳುವುದನವ ಬಿಡುವುದೆ ಇಲ್ಲ ||
ಉಳುವಾ ಯೋಗಿಯ ನೋಡಲ್ಲಿ ||

ಯಾರೂ ಅರಿಯದ ನೇಗಿಲ ಯೋಗಿಯೆ ಲೋಕಕೆ ಅನ್ನವನೀಯುವನು
ಹೆಸರನು ಬಯಸದೆ ಅತಿಸುಖ ಗಳಿಸದೆ ದುಡಿವನು ಗೌರವಕಾಶಿಸದೆ
ನೇಗಿಲ ಕುಲದೊಳಗಡಗಿದೆ ಕರ್ಮ ನೇಗಿಲ ಮೇಲೆಯೆ ನಿಂತಿದೆ ಧರ್ಮ ||
ಉಳುವಾ ಯೋಗಿಯ ನೋಡಲ್ಲಿ ||

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X