twitter
    For Quick Alerts
    ALLOW NOTIFICATIONS  
    For Daily Alerts

    ಗೀತಸಾಹಿತಿ ಗೀತಪ್ರಿಯ ಚಿಕಿತ್ಸೆಗೆ ಸಿಎಂ ಪರಿಹಾರ

    By Rajendra
    |

    ಬೆಸುಗೆ ಬೆಸುಗೆ ಜೀವನವೆಲ್ಲಾ ಸುಂದರ ಬೆಸುಗೆ, ನಮ್ಮೂರ್ನಾಗ್ ನಾನೊಬ್ಬನೆ ಜಾಣ, ಇದೇನು ಸಭ್ಯತೆ ಇದೇನ ಸಂಸ್ಕೃತಿ, ಹಕ್ಕಿಯು ಹಾರುತಿದೆ, ವೀಣಾ ನಿನಗೇಕೋ ಈ ಕಂಪನ...ಹಾಡುಗಳನ್ನು ಕೇಳಿದಾಗಲೆಲ್ಲಾ ಅವರು ಕೇವಲ ಗೀತಪ್ರಿಯ (81)ರಷ್ಟೆ ಅಲ್ಲ ಸಂಗೀತ ಪ್ರಿಯರು ಎಂಬುದು ಮನದಟ್ಟಾಗುತ್ತದೆ. ಒಂದೇ ಬಳ್ಳಿಯ ಹೂಗಳು, ಬೆಟ್ಟದ ಹುಲಿ, ಹೊಂಬಿಸಿಲು ಸೇರಿದಂತೆ ಮುವ್ವತ್ತು ಅರ್ಥಪೂರ್ಣ ಚಿತ್ರಗಳನ್ನು ಕೊಟ್ಟಂತಹ ನಿರ್ದೇಶಕರು ಗೀತಪ್ರಿಯ.

    ಈಗವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ದೇಹಸ್ಥಿತಿ ಗಂಭೀರವಾಗಿರುವ ವಿಷಯ ಗೊತ್ತೇ ಇದೆ. ಗಂಟಲಲ್ಲಿ ಕಾಣಿಸಿಕೊಂಡಿದ್ದ ಗಂಟಿನ ಆಪರೇಷನ್ ಆದನಂತರ ಬೆಂಗಳೂರಿನ ಮಹಾಲಕ್ಷ್ಮಿಪುರಂ ಮನೆಯಲ್ಲಿ ಲಕ್ಷ್ಮಣರಾವ್ ಮೋಹಿತೆ (ಗೀತಪ್ರಿಯ) ಹಾಸಿಗೆ ಹಿಡಿದಿದ್ದಾರೆ. ಆಪರೇಷನ್ ಕಾರಣದಿಂದಾಗಿ ಮಾತಾಡಲು ಬಾಯಿ ತೆಗೆದರೂ ಮಾತೇ ಹೊರಡುತ್ತಿಲ್ಲ.

    ಈಗಾಗಲೆ ಚಿತ್ರೋದ್ಯಮದ ಹಲವು ಗಣ್ಯರು ಗೀತಪ್ರಿಯ ಅವರಿಗೆ ಆರ್ಥಿಕ ಸಹಾಯ ಮಾಡಿ ಅವರ ಶಸ್ತ್ರಚಿಕಿತ್ಸೆಗೆ ನೆರವಾಗಿದ್ದಾರೆ. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸದಾನಂದಗೌಡರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗೀತಪ್ರಿಯರಿಗೆ ರು.1.50 ಪರಿಹಾರವನ್ನು ನೀಡಿದ್ದಾರೆ. ಈ ಹಣ ಶೀಘ್ರದಲ್ಲೇ ಗೀತಪ್ರಿಯ ಅವರ ಕೈ ಸೇರಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ತಿಳಿಸಿದೆ.

    ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಚಿತ್ರೋದ್ಯಮದ ಹಲವರು ಗಣ್ಯರು, ಫಿಲಂ ಚೇಂಬರ್, ಶರವಣ ಸಾಯಿ ಗೋಲ್ಡ್, ರಮೇಶ್ ಅರವಿಂದ್, ಶ್ರೀನಿವಾಸಮೂರ್ತಿ ಹೀಗೆ ದೊಡ್ಡಬಳಗವೇ ಗೀತಪ್ರಿಯ ಅವರ ಬೆನ್ನಿಗೆ ನಿಂತಿದ್ದು ಅವರ ಆರ್ಥಿಕ ನೆರವು ನೀಡಿದ್ದಾರೆ. (ಒನ್‌ಇಂಡಿಯಾ ಕನ್ನಡ)

    English summary
    Karnataka government chief minister relief fund has been allotted Rs.1.50 lakh relief for Kannada lyricist Geethapriya. Geetha Priya (81), a living legend of Kannada filmdom is fighting ill health.
    Saturday, February 25, 2012, 13:01
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X