Don't Miss!
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಳ್ಳರ ಸಂತೆ' ಚಿತ್ರಕ್ಕೆ ಹಿನ್ನೆಲೆ ಸಂಗೀತ
ಮೇಘ ಮೂವೀಸ್ ಲಾಂಛನದಲ್ಲಿ ಸೈಯ್ಯದ್ ಅಮಾನ್ ಹಾಗೂ ರವೀಂದ್ರ ಅವರು ನಿರ್ಮಿಸುತ್ತಿರುವ 'ಕಳ್ಳರ ಸಂತೆ' ಚಿತ್ರಕ್ಕೆ ಪ್ರಸಾದ್ ಸ್ಟೂಡಿಯೋದಲ್ಲಿ ಸಂಗೀತ ನಿರ್ದೇಶಕ ವಿ.ಮನೋಹರ್ ಅವರ ಸಾರಥ್ಯದಲ್ಲಿ ಹಿನ್ನೆಲೆ ಸಂಗೀತ ನಡೆಯುತ್ತಿದೆ.
ನಮ್ಮ ಸಂಸ್ಥೆಯಿಂದ ನಿರ್ಮಾಣವಾದ 'ಆ ದಿನಗಳು', 'ಸ್ಲಂ ಬಾಲ' ಚಿತ್ರಕ್ಕೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು ವಿಭಿನ್ನ ಕಥಾ ಹಂದರವುಳ್ಳ 'ಕಳ್ಳರ ಸಂತೆ' ಚಿತ್ರ ಕೂಡ ಸಿನಿಮಾಸಕ್ತರಿಗೆ ಮೆಚ್ಚುಗೆಯಾಗಲಿದೆ ಎಂದು ತಿಳಿಸಿರುವ ನಿರ್ಮಾಪಕರು, ನಿರ್ದೇಶಕಿ ಸುಮನಾ ಕಿತ್ತೂರು ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಪತ್ರಕರ್ತ ಆಗ್ನಿ ಶ್ರೀಧರ್ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುಂದರನಾಥ ಸುವರ್ಣ ಛಾಯಾಗ್ರಹಣ, ನಾಗೇಂದ್ರ ಅರಸ್ ಸಂಕಲನ, ಸುಮನಾ ಕಿತ್ತೂರು ಹಾಗೂ ವಿ.ಮನೋಹರ್ ಗೀತರಚನೆ, ಡಿಫರೆಂಟ್ ಡ್ಯಾನಿ ಸಾಹಸ, ಮದನ್ ಹರಿಣಿ ನೃತ್ಯ ಹಾಗೂ ಮಧುಗಿರಿ ಪ್ರಕಾಶ್ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಯಶ್, ಹರಿಪ್ರಿಯಾ, ಕಿಶೋರ್, ರಂಗಾಯಣ ರಘು, ಸುಧಾ ಬೆಳವಾಡಿ ಇದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)