Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಫೀವರ್ 104'ನಲ್ಲಿ ಕನ್ನಡರಾಜ್ಯೋತ್ಸವ ಸಪ್ತಾಹ
ಕನ್ನಡ ರಾಜ್ಯೋತ್ಸವನ್ನು ವಿಭಿನ್ನವಾಗಿ ಆಚರಿಸುವ ಪ್ರಯತ್ನಕ್ಕೆ ಜನಪ್ರಿಯ ಎಫ್ ಎಂ ವಾಹಿನಿ 'ಫೀವರ್ 104' ಮುಂದಾಗಿದೆ .'ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ' ಎಂಬ ಭಿನ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಈಗಾಗಲೇ ಆರಂಭವಾಗಿರುವ ಈ ಕಾರ್ಯಕ್ರಮ ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೂ ಒಂದು ವಾರ ಕಾಲ ನಡೆಯಲಿದೆ.
ಒಂದು ವಾರ ಕಾಲ ವಿವಿಧ ಕ್ಷೇತ್ರಗಳಲ್ಲಿ (ಕನ್ನಡ ಚಿತ್ರರಂಗ, ಸಂಗೀತ, ದೂರದರ್ಶನ, ಆಹಾರ, ಸಾಹಿತ್ಯ, ಕನ್ನಡ ಉದ್ಯಮಿ) ಸಾಧನೆ ಮಾಡಿರುವವರನ್ನು ಸಂದರ್ಶಿಸುವ ಮೂಲಕ ಕನ್ನಡರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಲಿದೆ. ಈ ಮೂಲಕ ಕನ್ನಡ ರಾಜ್ಯೋತ್ಸವವಕ್ಕೆ ಮತ್ತಷ್ಟು ಮೆರುಗು ತರುವ ಪ್ರಯತ್ನಕ್ಕೆ ಫೀವರ್ 104 ಎಫ್ ಎಂ ಕೈ ಹಾಕಿದೆ.
ನಟರಾದ ರಮೇಶ್ ಭಟ್, ಸಿಹಿ ಕಹಿ ಚಂದ್ರು, ಗಾಯಕ ರಾಜೇಶ್ ಕೃಷ್ಣನ್, ನಿರ್ದೇಶಕ ಯೋಗರಾಜ್ ಭಟ್, ಟಿ ಎನ್ ಸೀತಾರಾಮ್ ಅವರು ಸಂದರ್ಶನದ ಮೂಲಕ ಶ್ರೋತೃಗಳಿಗೆ ಮತ್ತಷ್ಟು ಹತ್ತಿರವಾಗಲಿದ್ದಾರೆ. ಕನ್ನಡ ರಾಜ್ಯೋತ್ಸವವನ್ನು ಮತ್ತಷ್ಟು ಅರ್ಥಗರ್ಭಿತವಾಗಿ ಆಚರಿಸುವ ಉದ್ದೇಶದಿಂದ ಈ ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ ಎಂದು ಫೀವರ್ 104 ಎಫ್ ಎಂ ನ ರಾಷ್ಟ್ರೀಯ ಮಾರುಕಟ್ಟೆ ಮುಖ್ಯಸ್ಥ ನೀರಜ್ ಚತುರ್ವೇದಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)