Don't Miss!
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾನ ಕೋಗಿಲೆ ಘಜಲ್ ಗಾಯಕಿ ಜ್ಯೋತಿ ಅಸ್ತಂಗತ
ಜ್ಯೋತಿ ಅವರು ಗಾನ ಗಂಧರ್ವ ಡಾ.ರಾಜ್ ಕುಮಾರ್, ಎಸ್ ಪಿ ಬಾಲಸುಬ್ರಹ್ಮಣ್ಯಂ, ಪಿ ಬಿ ಶ್ರೀನಿವಾಸ್ ಸೇರಿದಂತೆ ಅನೇಕ ಗಾಯಕರೊಂದಿಗೆ ಹಾಡಿದ್ದಾರೆ. ಎಂಟು ಭಾಷೆಗಳಲ್ಲಿ ಹಾಡಿರುವ ಜ್ಯೋತಿ ಸುಮಾರು 10 ಸಾವಿರ ಗೀತೆಗಳು ಅವರ ಕಂಠಸಿರಿಯಿಂದ ಹೊರಹೊಮ್ಮಿವೆ.
ಕಲಾ ಜ್ಯೋತಿ ಆರ್ಕೆಸ್ಟ್ರಾ ತಂಡದ ಮೂಲಕ ಮೈಸೂರು ಸೇರಿದಂತೆ ನಾಡಿನಾದ್ಯಂತ ಹಲವಾರು ರಸಸಂಜೆ ಕಾರ್ಯಕ್ರಮಗಳನ್ನು ನಿರ್ವಹಿಸಿದ ಖ್ಯಾತಿ ಜ್ಯೋತಿ ಅವರದು. 2000ನೇ ಸಾಲಿನಲ್ಲಿ ಆರ್ಯಭಟ ಪ್ರಶಸ್ತಿ ಸೇರಿದಂತೆ ಬೆಂಗಳೂರು ಗಾಯನ ಸಮಾಜದ ಗಾನ ಕೋಗಿಲೆ ಅವರಿಗೆ ಸಿಕ್ಕ ಬಿರುದುಗಳು.
'ಶನಿ ಪ್ರಭಾವ' ಹಾಗೂ 'ಬಾಂಧವ್ಯ' ಎಂಬ ಎರಡು ಕನ್ನಡ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಜ್ಯೋತಿ ಅವರು ಮೈಸೂರು ಆಕಾಶವಾಣಿಯ ಗಾಯಕಿಯರು ಸೇರಿದಂತೆ ಎಷ್ಟೋ ಮಂದಿ ಉದಯೋನ್ಮುಖರಿಗೆ ತಮ್ಮ ಸೂಚನೆ ಸಲಹೆಗಳನ್ನು ನೀಡುತ್ತಿದ್ದರು. ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. (ದಟ್ಸ್ಕನ್ನಡ ಸಿನಿವಾರ್ತೆ)