Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾನ ಕೋಗಿಲೆ ಘಜಲ್ ಗಾಯಕಿ ಜ್ಯೋತಿ ಅಸ್ತಂಗತ
ಜ್ಯೋತಿ ಅವರು ಗಾನ ಗಂಧರ್ವ ಡಾ.ರಾಜ್ ಕುಮಾರ್, ಎಸ್ ಪಿ ಬಾಲಸುಬ್ರಹ್ಮಣ್ಯಂ, ಪಿ ಬಿ ಶ್ರೀನಿವಾಸ್ ಸೇರಿದಂತೆ ಅನೇಕ ಗಾಯಕರೊಂದಿಗೆ ಹಾಡಿದ್ದಾರೆ. ಎಂಟು ಭಾಷೆಗಳಲ್ಲಿ ಹಾಡಿರುವ ಜ್ಯೋತಿ ಸುಮಾರು 10 ಸಾವಿರ ಗೀತೆಗಳು ಅವರ ಕಂಠಸಿರಿಯಿಂದ ಹೊರಹೊಮ್ಮಿವೆ.
ಕಲಾ ಜ್ಯೋತಿ ಆರ್ಕೆಸ್ಟ್ರಾ ತಂಡದ ಮೂಲಕ ಮೈಸೂರು ಸೇರಿದಂತೆ ನಾಡಿನಾದ್ಯಂತ ಹಲವಾರು ರಸಸಂಜೆ ಕಾರ್ಯಕ್ರಮಗಳನ್ನು ನಿರ್ವಹಿಸಿದ ಖ್ಯಾತಿ ಜ್ಯೋತಿ ಅವರದು. 2000ನೇ ಸಾಲಿನಲ್ಲಿ ಆರ್ಯಭಟ ಪ್ರಶಸ್ತಿ ಸೇರಿದಂತೆ ಬೆಂಗಳೂರು ಗಾಯನ ಸಮಾಜದ ಗಾನ ಕೋಗಿಲೆ ಅವರಿಗೆ ಸಿಕ್ಕ ಬಿರುದುಗಳು.
'ಶನಿ ಪ್ರಭಾವ' ಹಾಗೂ 'ಬಾಂಧವ್ಯ' ಎಂಬ ಎರಡು ಕನ್ನಡ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಜ್ಯೋತಿ ಅವರು ಮೈಸೂರು ಆಕಾಶವಾಣಿಯ ಗಾಯಕಿಯರು ಸೇರಿದಂತೆ ಎಷ್ಟೋ ಮಂದಿ ಉದಯೋನ್ಮುಖರಿಗೆ ತಮ್ಮ ಸೂಚನೆ ಸಲಹೆಗಳನ್ನು ನೀಡುತ್ತಿದ್ದರು. ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ಅವರ ಅಂತ್ಯಕ್ರಿಯೆ ನೆರವೇರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. (ದಟ್ಸ್ಕನ್ನಡ ಸಿನಿವಾರ್ತೆ)