Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಫಿ ಶಾಪ್' ಧ್ವನಿಸುರುಳಿ ಮಾರುಕಟ್ಟೆಗೆ
ಗೀತಾ ಕೃಷ್ಣ ನಿರ್ದೇಶನದ 'ಕಾಫಿ ಶಾಪ್' ಚಿತ್ರದ ಧ್ವನಿಸುರುಳಿ ಮತ್ತು ಚಿತ್ರ ಟ್ರೈಲರ್ ಗಳನ್ನು ವಿಂಡ್ಸರ್ ಮ್ಯಾನರ್ ಪಂಚತಾರಾ ಹೋಟೆಲ್ ನಲ್ಲಿ ಬುಧವಾರ ಬಿಡುಗಡೆ ಮಾಡಲಾಯಿತು. 'ಅಂದುಕೊಂಡ ಹಾಗೆ ಇಲ್ಲ ಖಂಡಿತ ಖುಷಿ ಕೊಡುತ್ತೆ' ಎಂಬುದು ಚಿತ್ರದ ಟ್ಯಾಗ್ ಲೈನ್.
'ಕಾಫಿ ಶಾಪ್' ಚಿತ್ರದ ಧ್ವನಿಸುರುಳಿಯನ್ನು ಬಿಡುಗಡೆ ಮಾಡಿದ ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡುತ್ತಾ, ಕನ್ನಡ ಚಿತ್ರೋದ್ಯಮಕ್ಕೆ ಸರಕಾರ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಿದೆ. ಅದನ್ನು ಸಮರ್ಥವಾಗಿ ಬಳಸಿಕೊಂಡು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿ ಎಂದು ಕರೆಕೊಟ್ಟರು.
ಈ ಚಿತ್ರಕ್ಕೆ ತೆಲುಗಿನಲ್ಲಿ 'ಕಾಫಿ ಬಾರ್' ಎಂದು ತಮಿಳಿನಲ್ಲಿ 'ನಿಮಿಡಂಗಳ್'ಎಂದು ಹೆಸರಿಡಲಾಗಿದೆ. ಸಂದೇಶಾತ್ಮಕ ಚಿತ್ರಗಳನ್ನು ಕನ್ನಡದ ಪ್ರೇಕ್ಷಕರು ಖಂಡಿತಾ ಮೆಚ್ಚುತ್ತಾರೆ ಎಂಬ ಉದ್ದೇಶದಿಂದ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾಗಿ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕರೂ ಆಗಿರುವ ಗೀತಾ ಕೃಷ್ಣ ತಿಳಿಸಿದರು.
'ಅಪರಿಚಿತ' ಹಾಗೂ "ಸೈನೈಡ್"ನಂತಹ ಚಿತ್ರಗಳು ನನಗೆ ಪ್ರೇರಣೆ ನೀಡಿದವು ಎಂದು ಇಂಗ್ಲಿಷ್ ಮಿಶ್ರಿತ ಕನ್ನಡದಲ್ಲಿ ಗೀತಾ ಕೃಷ್ಣ ಹೇಳಿದರು. ಧ್ವನಿಸುರುಳಿ ಬಿಡುಗಡೆಗೂ ತಾವು ಹೇಳಿದ ಮಾತಿಗೂ ಒಂದಕ್ಕೊಂದು ಸಂಬಂಧ ಇಲ್ಲದಂತೆ ಮಾತನಾಡಿದವರು ಡೆಕ್ಕನ್ ಏವಿಯೇಷನ್ ನ ಕ್ಯಾಫ್ಟನ್ ಗೋಪಿನಾಥ್. ವಿಮಾನಯಾನ, ರಾಜಕೀಯ, ಸಮಾಜದಲ್ಲಿನ ಏರುಪೇರುಗಳು...ಭಾರತದಲ್ಲಿರುವ ಅವಕಾಶಗಳು ಹೀಗೆ ಎತ್ತೆತ್ತಲೋ ಸಾಗಿತ್ತು ಅವರ ಭಾಷಣ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ, ರಾಕ್ ಲೈನ್ ವೆಂಕಟೇಶ್, ತಾರಾ, ನೆ.ಲ.ನರೇಂದ್ರ ಬಾಬು, ಚಿನ್ನೇಗೌಡ, ಚಿತ್ರದ ನಾಯಕ ಶಶಾಂಕ್ ಮತ್ತು ನಾಯಕಿ ಬಿಯಾಂಕ ದೇಸಾಯಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಒಟ್ಟು ಆರು ಹಾಡುಗಳುಳ್ಳ 'ಕಾಫಿ ಶಾಪ್' ಚಿತ್ರಕ್ಕೆ ಸಾಹಿತ್ಯ ವಿ ನಾಗೇಂದ್ರ ಪ್ರಸಾದ್. ಸಂಗೀತ ಗೀತಾ ಕೃಷ್ಣ. ಹೈದರಾಬಾದ್ ನ ಆದಿತ್ಯ ಮ್ಯೂಸಿಕ್ಸ್ ಧ್ವನಿಸುರುಳಿಯನ್ನು ಹೊರತಂದಿದೆ.