Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವರ ಮಾಂತ್ರಿಕ, ಗಾಯಕ ಸಿ. ಅಶ್ವತ್ಥ್ ಇನ್ನಿಲ್ಲ
ಸಿ. ಅಶ್ವತ್ಥ್ ಅವರು ಹುಟ್ಟುಹಬ್ಬದ (ಡಿ.29) ದಿನದಂದೇ ವಿಧಿವಶರಾಗಿ ಅವರ ಅಪಾರ ಅಭಿಮಾನಿಗಳನ್ನು ಶೋಕ ಸಾಗರಕ್ಕೆ ದೂಡಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ 1939 ಡಿಸೆಂಬರ್ 29ರಂದು ಜನಿಸಿದ್ದರು. 75ಕ್ಕೂ ಹೆಚ್ಚು ಆಲ್ಪಂ ಗೀತೆಗಳನ್ನು ಸಿ ಅಶ್ವಥ್ ಅವರು ಹೊರತಂದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಪದವೀಧರರಾದ ಅವರು ಐಟಿಐನಲ್ಲಿ 27 ವರ್ಷಗಳ ಕಾಲ ಕಾರ್ಯಪಾಲಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
'ಕಾಕನ ಕೋಟೆ' ಮೂಲಕ ಚಲನಚಿತ್ರ ಕ್ಷೇತ್ರಕ್ಕೆ ಅಡಿಯಿಟ್ಟಿದ್ದ ಅಶ್ವಥ್ ಅವರು ಮೈಸೂರು ಮಲ್ಲಿಗೆ, ಶ್ರಾವಣ, ದೀಪಿಕಾ, ಶಿಶುನಾಶ ಷರೀಪ್ ಸಾಹೇಬರ ಗೀತೆಗಳಿಗೆ ಜೀವತುಂಬಿದ್ದರು. ಕನ್ನಡವೇ ಸತ್ಯ, ಸುಬ್ಬಾಭಟ್ಟರ ಮಗಳೆ,ಕೈಲಾಸಂ ಗೀತೆಗಳು,ನಾಗಮಂಡಲ, ಭಾವ ಬಿಂದು,ಕೂಡಲ ಸಂಗಮ ಮುಂತಾದ ಜನಪ್ರಿಯ ಧ್ವನಿಸುರುಳಿಗಳನ್ನು ಸಿ. ಅಶ್ವತ್ಥ್ ಹೊರತಂದಿದ್ದರು.
ಅಮೃತಧಾರೆ, ಹಠವಾದಿ,ಶಿಷ್ಯ,ತಿಮ್ಮ, ವೀರ, ಮಠ ಮುಂತಾದ ಚಲನಚಿತ್ರಗಳಲ್ಲೂ ಅಶ್ವಥ್ ಗಾನಸುಧೆ ಹರಿಸಿದ್ದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅಶ್ವಥ್ ಅವರ ನಿಧನಕ್ಕೆ ಕನ್ನಡ ಚಲನಚಿತ್ರ ಹಾಗೂ ಸಾಹಿತ್ಯ ಕ್ಷೇತ್ರದಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೆ ಕಲ್ಯಾಣ, ರಾಜೇಶ್ ಕೃಷ್ಣನ್, ಎಚ್ ಎಸ್ ವೆಂಕಟೇಶಮೂರ್ತಿ, ಟಿ ಎನ್ ಸೀತಾರಾಂ, ಬಿ ಆರ್ ಲಕ್ಷ್ಮಣರಾವ್ ಸೇರಿದಂತೆ ಹಲವಾರು ಗಣ್ಯರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.