Don't Miss!
- News 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮರಾಜ್ಯ ನಿರ್ಮಾಣ: ಡಾ. ಕೆ. ಸುಧಾಕರ್
- Lifestyle ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವರ ಮಾಂತ್ರಿಕ, ಗಾಯಕ ಸಿ. ಅಶ್ವತ್ಥ್ ಇನ್ನಿಲ್ಲ
ಸಿ. ಅಶ್ವತ್ಥ್ ಅವರು ಹುಟ್ಟುಹಬ್ಬದ (ಡಿ.29) ದಿನದಂದೇ ವಿಧಿವಶರಾಗಿ ಅವರ ಅಪಾರ ಅಭಿಮಾನಿಗಳನ್ನು ಶೋಕ ಸಾಗರಕ್ಕೆ ದೂಡಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ 1939 ಡಿಸೆಂಬರ್ 29ರಂದು ಜನಿಸಿದ್ದರು. 75ಕ್ಕೂ ಹೆಚ್ಚು ಆಲ್ಪಂ ಗೀತೆಗಳನ್ನು ಸಿ ಅಶ್ವಥ್ ಅವರು ಹೊರತಂದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಪದವೀಧರರಾದ ಅವರು ಐಟಿಐನಲ್ಲಿ 27 ವರ್ಷಗಳ ಕಾಲ ಕಾರ್ಯಪಾಲಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
'ಕಾಕನ ಕೋಟೆ' ಮೂಲಕ ಚಲನಚಿತ್ರ ಕ್ಷೇತ್ರಕ್ಕೆ ಅಡಿಯಿಟ್ಟಿದ್ದ ಅಶ್ವಥ್ ಅವರು ಮೈಸೂರು ಮಲ್ಲಿಗೆ, ಶ್ರಾವಣ, ದೀಪಿಕಾ, ಶಿಶುನಾಶ ಷರೀಪ್ ಸಾಹೇಬರ ಗೀತೆಗಳಿಗೆ ಜೀವತುಂಬಿದ್ದರು. ಕನ್ನಡವೇ ಸತ್ಯ, ಸುಬ್ಬಾಭಟ್ಟರ ಮಗಳೆ,ಕೈಲಾಸಂ ಗೀತೆಗಳು,ನಾಗಮಂಡಲ, ಭಾವ ಬಿಂದು,ಕೂಡಲ ಸಂಗಮ ಮುಂತಾದ ಜನಪ್ರಿಯ ಧ್ವನಿಸುರುಳಿಗಳನ್ನು ಸಿ. ಅಶ್ವತ್ಥ್ ಹೊರತಂದಿದ್ದರು.
ಅಮೃತಧಾರೆ, ಹಠವಾದಿ,ಶಿಷ್ಯ,ತಿಮ್ಮ, ವೀರ, ಮಠ ಮುಂತಾದ ಚಲನಚಿತ್ರಗಳಲ್ಲೂ ಅಶ್ವಥ್ ಗಾನಸುಧೆ ಹರಿಸಿದ್ದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅಶ್ವಥ್ ಅವರ ನಿಧನಕ್ಕೆ ಕನ್ನಡ ಚಲನಚಿತ್ರ ಹಾಗೂ ಸಾಹಿತ್ಯ ಕ್ಷೇತ್ರದಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೆ ಕಲ್ಯಾಣ, ರಾಜೇಶ್ ಕೃಷ್ಣನ್, ಎಚ್ ಎಸ್ ವೆಂಕಟೇಶಮೂರ್ತಿ, ಟಿ ಎನ್ ಸೀತಾರಾಂ, ಬಿ ಆರ್ ಲಕ್ಷ್ಮಣರಾವ್ ಸೇರಿದಂತೆ ಹಲವಾರು ಗಣ್ಯರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.