Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೂರರ ಸಂಭ್ರಮದಲ್ಲಿ 'ಬೆಲ್ ಬಾಟಂ' ವಿಶೇಷ ಹಾಡು ಬಿಡುಗಡೆ
'ಬೆಲ್ ಬಾಟಂ' ಸಿನಿಮಾ ಈ ವರ್ಷ ನೂರು ದಿನ ಪೂರೈಸಿದ ಮೊದಲ ಚಿತ್ರವಾಗಿದೆ. ಈ ಸಂತಸದಲ್ಲಿ ಸಿನಿಮಾದ ಬಹು ಮುಖ್ಯ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
'ಆದಿ ಜ್ಯೋತಿ ಬನ್ಯೋ..' ಹಾಡು ಇದೀಗ ಯೂ ಟ್ಯೂಬ್ ನಲ್ಲಿ ಹೊರ ಬಂದಿದೆ. ಸಿನಿಮಾದ ಬಹುಮುಖ್ಯವಾಗಿರುವ ಈ ಹಾಡನ್ನು ಯೂಟ್ಯೂಬ್ ನಲ್ಲಿಯೂ ಈಗ ನೋಡಬಹುದಾಗಿದೆ. ಚಿತ್ರದ ದೊಡ್ಡ ತಿರುವು ಈ ಹಾಡಿನಲ್ಲಿ ನಡೆಯಲಿದ್ದು, ಈ ಕಾರಣ ಇದುವರೆಗೆ ಹಾಡಿನ ವಿಡಿಯೋವನ್ನು ಬಿಡುಗಡೆ ಮಾಡಿರಲಿಲ್ಲ.
ಅಂದಹಾಗೆ, ಈ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಜನಪದ ಹಾಡನ್ನು ಸಿನಿಮಾಗೆ ಬಳಸಿಕೊಳ್ಳಲಾಗಿದೆ. ಕಡಬಗೆರೆ ಮುನಿರಾಜು ಎಂಬ ಜನಪದ ಗಾಯಕ ಈ ಹಾಡನ್ನು ಹಾಡಿದ್ದಾರೆ.
ಸದ್ಯಕ್ಕೆ, ಯೂಟ್ಯೂಬ್ ನಲ್ಲಿ ಕಡಿಮೆ ಹಿಟ್ಸ್ ಸಿಕ್ಕಿದ್ದರೂ ಹಾಡು ನೋಡಿದ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಹಾಡಿನ ಅರ್ಥವನ್ನು ಕೊಂಡಾಡಿದ್ದಾರೆ. ರಂಗಭೂಮಿ ಹಾಗೂ ಜನಪದದ ಬಗ್ಗೆ ಆಗಾದ ಪ್ರೀತಿ ಹೊಂದಿರುವ ನಿರ್ದೇಶಕ ಜಯತೀರ್ಥ ಈ ಹಾಡನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದಾರೆ.
'ಬೆಲ್ ಬಾಟಂ' ರಿಷಬ್ ಶೆಟ್ಟಿ ಹಾಗೂ ಹರಿಪ್ರಿಯಾ ನಟನೆಯ ಸಿನಿಮಾವಾಗಿದ್ದು, ಮೇ 24 ಕ್ಕೆ ಸರಿಯಾಗಿ ಚಿತ್ರ ನೂರು ದಿನ ಪೂರೈಸಿತ್ತು.