Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೀಮ' ಚಿತ್ರದ ಮೊದಲ ಹಾಡು 'ಡೋಂಟ್ ವರಿ ಬೇಬಿ ಚಿನ್ನಮ್ಮ' ರೆಡಿ
2021ರಲ್ಲಿ ತಾನೇ ಚಿತ್ರಕತೆ ಬರೆದು ನಿರ್ದೇಶನವನ್ನೂ ಮಾಡಿ, ನಟಿಸಿ 'ಸಲಗ' ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದ ದುನಿಯಾ ವಿಜಯ್ ಈಗ ತಮ್ಮ ಮುಂದಿನ ಕನ್ನಡ ಚಿತ್ರವನ್ನೂ ಸಹ ತಾವೇ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರಕ್ಕೆ 'ಭೀಮ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಈ ಹಿಂದೆ ಚಿತ್ರದ ಹಲವಾರು ಪಾತ್ರಗಳನ್ನು ಪೋಸ್ಟರ್ ಮೂಲಕ ಪರಿಚಯಿಸಿದ್ದ ಭೀಮ ಚಿತ್ರತಂಡ ಈಗ ತಮ್ಮ ಚಿತ್ರದ ಮೊದಲ ಹಾಡಿನ ಮಾಹಿತಿಯನ್ನು ಹಂಚಿಕೊಂಡಿದೆ. 'ಡೋಂಟ್ ವರಿ ಬೇಬಿ ಚಿನ್ನಮ್ಮ' ಎಂಬ ಹಾಡಿನ ರೆಕಾರ್ಡಿಂಗ್ ಮುಗಿದಿದೆ ಎಂದು ಪೋಸ್ಟರ್ ಹಂಚಿಕೊಂಡಿಕೊಳ್ಳುವ ಮೂಲಕ ತಿಳಿಸಿದೆ ಭೀಮ ಚಿತ್ರತಂಡ.
ಈ ಹಾಡಿಗೆ ತಮಿಳಿನ ಗಾಯಕ ಗಣ ಮುತ್ತು ಎಂಬುವವರು ದನಿ ನೀಡಿದ್ದಾರೆ. ತಮಿಳಿನ ಮಹಾನ್ ಹಾಗೂ ಪ್ಯಾರಿಸ್ ಜಯರಾಜ್ ಸೇರಿದಂತೆ ಹಲವಾರು ಚಿತ್ರಗಳ ಹಾಡುಗಳನ್ನು ಹಾಡಿರುವ ಗಣ ಮುತ್ತು ದನಿಯಲ್ಲಿ ಮೂಡಿ ಬಂದಿರುವ ಆಲ್ಬಂ ಹಾಡುಗಳು ಸಿಕ್ಕಾಪಟ್ಟೆ ಫೇಮಸ್ ಆಗಿವೆ. ಇನ್ನು ಸಲಗ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದ ಚರಣ್ ರಾಜ್ ಅವರೇ ಭೀಮ ಚಿತ್ರಕ್ಕೂ ಸಂಗೀತ ನಿರ್ದೇಶಿಸುತ್ತಿದ್ದಾರೆ.
ಇನ್ನು ಈ ಹಿಂದೆ ಸಲಗ ಚಿತ್ರದಲ್ಲೂ ಸಹ ತಮಿಳಿನ ಖ್ಯಾತ ಗಾಯದ ಆಂಟೊನಿ ದಾಸನ್ ಕಂಠದಲ್ಲಿ ಮೂಡಿ ಬಂದಿದ್ದ 'ಸೂರಿ ಅಣ್ಣ' ಹಾಡನ್ನು ಮೊದಲು ಚಿತ್ರತಂಡ ಬಿಡುಗಡೆ ಮಾಡಿತ್ತು. ಚರಣ್ ರಾಜ್ ಸಂಗೀತ ಹಾಗೂ ಆಂಟನಿ ದಾಸನ್ ಕಾಂಬಿನೇಶನ್ನ ಈ ಹಾಡು ಚಾರ್ಟ್ಬಸ್ಟರ್ ಆಗಿತ್ತು. ಸದ್ಯ ಹಾಡಿನ ರೆಕಾರ್ಡಿಂಗ್ ಮುಗಿಸಿರುವ ಭೀಮ ಚಿತ್ರತಂಡ ಹಾಡನ್ನು ಯಾವಾಗ ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಹೆಚ್ಚಿದೆ.